Select Your Language

Notifications

webdunia
webdunia
webdunia
webdunia

ಶಿವಕುಮಾರ್ ಮಾಟ-ಮಂತ್ರ ಮಾಡಿಸ್ತಿದ್ದಾರೆ : ಆರ್.ಅಶೋಕ್

ಶಿವಕುಮಾರ್ ಮಾಟ-ಮಂತ್ರ ಮಾಡಿಸ್ತಿದ್ದಾರೆ : ಆರ್.ಅಶೋಕ್
ರಾಮನಗರ , ಗುರುವಾರ, 27 ಏಪ್ರಿಲ್ 2023 (10:29 IST)
ರಾಮನಗರ : ನಾನು ಕನಕಪುರಕ್ಕೆ ಬಂದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಯ ಕಾಡುತ್ತಿದೆ, ಅದಕ್ಕಾಗಿ ಮಾಟ – ಮಂತ್ರ ಮಾಡಿಸುತ್ತಿದ್ದಾರೆ ಎಂದು ಆರ್. ಅಶೋಕ್ ವ್ಯಂಗ್ಯವಾಡಿದರು.

ಕನಕಪುರ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ಗೆ ಸೋಲಿನ ಬಗ್ಗೆ ಅರಿವು ಆದ ಕೂಡಲೇ ಹೋಮ, ಹವನ ಮಾಡಿಸುತ್ತಿದ್ದಾರೆ. ಮಾಟ-ಮಂತ್ರ ಎಲ್ಲ ಮಾಡಿಸುತ್ತಿದ್ದಾರೆ.

ಅಷ್ಟೇ ಅಲ್ಲದೇ ಅವರ ಶ್ರೀಮತಿಯೂ ಫಸ್ಟ್ ಟೈಮ್ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ನನ್ನನ್ನು ಅವರು ಟ್ರಾಕ್ ಮಾಡುತ್ತಿದ್ದಾರೆ. ಆದರೆ ಅವರಿಗೆ ಗೆಲುವು ಈ ಸಾರಿ ಅಷ್ಟು ಸುಲಭವಲ್ಲ ಎಂದು ಸವಾಲು ಹಾಕಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಶೆಟ್ಟರ್ ಅರ್ಥ ಮಾಡಿಕೊಳ್ಳಲು ಆಗಲಿಲ್ಲ, ಫೇಲ್ ಆದೆ : ಪ್ರಹ್ಲಾದ್ ಜೋಶಿ