Select Your Language

Notifications

webdunia
webdunia
webdunia
webdunia

ಅತಿ ಬುದ್ದಿವಂತಿಕೆ ಪ್ರದರ್ಶಿಸುವುದು ಬಿಟ್ಟುಬಿಡಿ: ಅಧಿಕಾರಿಗಳಿಗೆ ಸಿಎಂ ವಾರ್ನಿಂಗ್

ಸಿಎಂ ಸಿದ್ದರಾಮಯ್ಯ
ಬೆಂಗಳೂರು: , ಮಂಗಳವಾರ, 28 ಜೂನ್ 2016 (12:49 IST)
ಉನ್ನತ ಹುದ್ದೆಗಳನ್ನು ಅಲಂಕರಿಸಿರುವ ಅಧಿಕಾರಿಗಳು ಅತಿ ಬುದ್ದಿವಂತಿಕೆ ಪ್ರದರ್ಶಿಸುವುದು ಬಿಟ್ಟು ಮಾನವೀಯತೆಯಿಂದ ಬಡವರಿಗೆ ಸಹಾಯ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
 
ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಅರಣ್ಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ,  ಅರಣ್ಯ ಕಾಯ್ದೆ ತಿದ್ದುಪಡಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತನ್ನಿ. ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಿ. ಯಾವುದೇ ಅರ್ಜಿಯನ್ನು ನೆನೆಗುದಿಯಲ್ಲಿ ಇಡುವುದು ಬೇಡ ಎಂದು ಕಿವಿಮಾತು ಹೇಳಿದ್ದಾರೆ.
 
ಅಧಿಕಾರಿಗಳು ಕೇವಲ ಜಿಲ್ಲಾ ಕೇಂದ್ರಗಳಲ್ಲಿ ಇರುವುದು ಬಿಟ್ಟು ಪ್ರತಿಯೊಂದು ಗ್ರಾಮಕ್ಕೆ ಭೇಟಿ ನೀಡಿ ಜನರ ಕುಂದುಕೊರತೆಗಳನ್ನು ಪರಿಶೀಲಿಸಿ. ನಿಮ್ಮಿಂದ ಯಾವುದಾದರೂ ಅಸಾಧ್ಯವೆನಿಸಿದರೆ ನೇರವಾಗಿ ನನ್ನನ್ನು ಸಂಪರ್ಕಿಸಿ. ಸರಕಾರದದಲ್ಲಿ ಹಣದ ಕೊರತೆಯಿಲ್ಲ. ಯೋಜನೆಗಳ ಜಾರಿಯ ಕೊರತೆಯಾಗಿದೆ ಎಂದರು.
 
ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಚ್ಚಾಶಕ್ತಿಯನ್ನು ಪ್ರದರ್ಶಿಸಿದಲ್ಲಿ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವುದು ಕಷ್ಟವಲ್ಲ. ಅಧಿಕಾರಿ ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಬೇಕು. ಬೇಜವಾಬ್ದಾರಿ ವರ್ತನೆ ತೋರಿದ ಅಧಿಕಾರಿಗಳಿಗೆ ಕಾದಿದೆ ಕಠಿಣ ಶಿಕ್ಷೆ. ಅಂತಹ ಶಿಕ್ಷೆ ಜಾರಿಗೊಳಿಸಲು ಬಿಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗೋಮೂತ್ರದಲ್ಲಿ ಚಿನ್ನದ ಅಂಶ ಪತ್ತೆ