Webdunia - Bharat's app for daily news and videos

Install App

ಸ್ಕೈವಾಕ್ ಗಳ ನಿರ್ಮಾಣ ಶೀಘ್ರದಲ್ಲೇ - ಆರ್. ಅಶೋಕ

Webdunia
ಬುಧವಾರ, 23 ಮಾರ್ಚ್ 2022 (16:58 IST)
ನಗರದಲ್ಲಿ ನಿರ್ಮಾಣ ಗೊಂಡಿರುವ ಸ್ಕೈವಾಕ್ ಗಳು ಸದುಪಯೋಗವಾಗದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸಲು ಪ್ರಯತ್ನಿಸುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ವಿಧಾನಪರಿಷತ್‍ನ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ವಿಷಯ ಪ್ರಸ್ತಾಪಿಸಿ, ಬೆಂಗಳೂರು ನಗರದಲ್ಲಿ ನಿರ್ಮಿಸಲಾದ ಸ್ಕೈವಾಕ್‍ಗಳು ಸದುಪಯೋಗವಾಗುತ್ತಿಲ್ಲ. ಜನರ ಸಂಚಾರದ ಬದಲು ಜಾಹಿರಾತುಗಳ ಪ್ರದರ್ಶನಕ್ಕೆ ಬಳಕೆಯಾಗುತ್ತವೆ. ಬಸವೇಶ್ವರ ವೃತ್ತ, ಮಹರಾಣಿ ಕಾಲೇಜು, ಯಶವಂತಪುರ ಸೇರಿದಂತೆ ಹಲವು ಕಡೆಗಳಲ್ಲಿ ಸ್ಕೈವಾಕ್ ಗಳು ಸರಿಯಾಗಿ ಬಳಕೆಯಾಗಿಲ್ಲ ಎಂದು ವಿವರಿಸಿದರು.
 
2015ರಲ್ಲಿ ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರು ಬಿಬಿಎಂಪಿಗೆ ಪತ್ರ ಬರೆದು ಸ್ಕೈ ವಾಕ್ ಗಳ ನಿರ್ಮಾಣದ ವೇಳೆ ಪೊಲೀಸರ ಸಲಹೆ ಪಡೆಯುವಂತೆ ಸಲಹೆ ನೀಡಿದ್ದಾರೆ.
 
ಅನಗತ್ಯವಾಗಿ ಸ್ಕೈ ವಾಕ್ ಗಳ ನಿರ್ಮಿಸಲಾಗಿದೆ ಎಂದು ಆಕ್ಷೇಪಿಸಿದ್ದಾರೆ. ಖಾಸಗಿಯವರು ನಿರ್ವಹಣೆ ಮಾಡುತ್ತಾರೆ ಎಂಬ ಕಾರಣಕ್ಕೆ ಬೇಕಾಬಿಟ್ಟಿ ಸ್ಕೈವಾಕ್ ಗಳನ್ನು ನಿರ್ಮಿಸಲಾಗಿದೆ. ಇವು ಸರಿಯಾಗಿ ಬಳಕೆಯಾಗುತ್ತಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments