ಕಿಡಿಗೇಡಿಗಳ ಕೊನೆಯ ಅಸ್ತ್ರವೇ ಅಪಪ್ರಚಾರ

Webdunia
ಸೋಮವಾರ, 15 ಮೇ 2023 (18:50 IST)
ಬಿಜೆಪಿ ಪಕ್ಷ ಸೋತ ಬಳಿಕ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​ ಸಂತೋಷ್ ವಿರುದ್ಧ ಕೆಲವರು ಟೀಕಾ ಪ್ರಹಾರ ನಡೆಸಿದ್ರು.. ಕೆಲವರು ಸೋಶಿಯಲ್​ ಮಿಡಿಯಾದಲ್ಲಿ ಸಂತೋಷ್ ಕಾಲೆಳೆದಿದ್ರು. ಇದಕ್ಕೆ ಮಾಜಿ ಸಚಿವ C.N ಅಶ್ವತ್ಥ್​​ ನಾರಾಯಣ್​​ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್​​ ಮಾಡಿರುವ ಅವರು, ​​​​ಭಾರತೀಯ ಜನತಾ ಪಾರ್ಟಿಯ ಗೆಲುವಿಗಾಗಿ ಹಗಲಿರುಳು ಶ್ರಮಿಸುತ್ತಿರುವವರು B.L ಸಂತೋಷ್​​​.. ಅವರು ನಮ್ಮ ಪಕ್ಷದ ಅಸಂಖ್ಯ ಕಾರ್ಯಕರ್ತರನ್ನು ಅಣಿಗೊಳಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿರುವವರಲ್ಲಿ ಒಬ್ಬರು.. ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಬರಹಗಳು ಹೊರಬರುತ್ತಿರುವುದನ್ನು ಗಮನಿಸುತ್ತಿದ್ದೇವೆ. ಅವರು ಯಾವುದೇ ಅಧಿಕಾರದ ಆಸೆ ಇಲ್ಲದೇ, ತಮ್ಮ ಜೀವನವನ್ನು ಪಕ್ಷ ಸಂಘಟನೆ ಹಾಗೂ ರಾಷ್ಟ್ರದ ಶ್ರೇಯಕ್ಕಾಗಿ ಮುಡಿಪಾಗಿಟ್ಟಿದ್ದಾರೆ. ಅಂಥಹ ವ್ಯಕ್ತಿಗಳನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಕಿಡಿಗೇಡಿಗಳ ಕೊನೆಯ ಅಸ್ತ್ರವೇ ಅಪಪ್ರಚಾರ. ಇಂತಹ ನಕಾರಾತ್ಮಕ ಸುದ್ದಿಗಳನ್ನು ಹರಿಬಿಟ್ಟು ಭಾರತೀಯ ಜನತಾ ಪಾರ್ಟಿಯ ಶಕ್ತಿಯನ್ನು ಕುಂದಿಸುವ ಯತ್ನ ವಿಫಲ ಪ್ರಯತ್ನವಿದು.. ಸೋಲಿನ ಆತ್ಮವಿಮರ್ಶೆ ಆಗಲಿದೆ. ಅದು‌ ಮುಂದಿನ ಗೆಲುವಿನ ದಾರಿ ತೋರಿಸುತ್ತದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments