Webdunia - Bharat's app for daily news and videos

Install App

ಕಿಡಿಗೇಡಿಗಳ ಕೊನೆಯ ಅಸ್ತ್ರವೇ ಅಪಪ್ರಚಾರ

Webdunia
ಸೋಮವಾರ, 15 ಮೇ 2023 (18:50 IST)
ಬಿಜೆಪಿ ಪಕ್ಷ ಸೋತ ಬಳಿಕ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​ ಸಂತೋಷ್ ವಿರುದ್ಧ ಕೆಲವರು ಟೀಕಾ ಪ್ರಹಾರ ನಡೆಸಿದ್ರು.. ಕೆಲವರು ಸೋಶಿಯಲ್​ ಮಿಡಿಯಾದಲ್ಲಿ ಸಂತೋಷ್ ಕಾಲೆಳೆದಿದ್ರು. ಇದಕ್ಕೆ ಮಾಜಿ ಸಚಿವ C.N ಅಶ್ವತ್ಥ್​​ ನಾರಾಯಣ್​​ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್​​ ಮಾಡಿರುವ ಅವರು, ​​​​ಭಾರತೀಯ ಜನತಾ ಪಾರ್ಟಿಯ ಗೆಲುವಿಗಾಗಿ ಹಗಲಿರುಳು ಶ್ರಮಿಸುತ್ತಿರುವವರು B.L ಸಂತೋಷ್​​​.. ಅವರು ನಮ್ಮ ಪಕ್ಷದ ಅಸಂಖ್ಯ ಕಾರ್ಯಕರ್ತರನ್ನು ಅಣಿಗೊಳಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿರುವವರಲ್ಲಿ ಒಬ್ಬರು.. ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಬರಹಗಳು ಹೊರಬರುತ್ತಿರುವುದನ್ನು ಗಮನಿಸುತ್ತಿದ್ದೇವೆ. ಅವರು ಯಾವುದೇ ಅಧಿಕಾರದ ಆಸೆ ಇಲ್ಲದೇ, ತಮ್ಮ ಜೀವನವನ್ನು ಪಕ್ಷ ಸಂಘಟನೆ ಹಾಗೂ ರಾಷ್ಟ್ರದ ಶ್ರೇಯಕ್ಕಾಗಿ ಮುಡಿಪಾಗಿಟ್ಟಿದ್ದಾರೆ. ಅಂಥಹ ವ್ಯಕ್ತಿಗಳನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಕಿಡಿಗೇಡಿಗಳ ಕೊನೆಯ ಅಸ್ತ್ರವೇ ಅಪಪ್ರಚಾರ. ಇಂತಹ ನಕಾರಾತ್ಮಕ ಸುದ್ದಿಗಳನ್ನು ಹರಿಬಿಟ್ಟು ಭಾರತೀಯ ಜನತಾ ಪಾರ್ಟಿಯ ಶಕ್ತಿಯನ್ನು ಕುಂದಿಸುವ ಯತ್ನ ವಿಫಲ ಪ್ರಯತ್ನವಿದು.. ಸೋಲಿನ ಆತ್ಮವಿಮರ್ಶೆ ಆಗಲಿದೆ. ಅದು‌ ಮುಂದಿನ ಗೆಲುವಿನ ದಾರಿ ತೋರಿಸುತ್ತದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments