ಎಸ್.ಎಂ.ಕೃಷ್ಣ ಕರೆ ಮಾಡಿದ್ರು- ಎಂ.ಬಿ.ಪಾಟೀಲ್ ಸಿಡಿಸಿದ್ರು ಹೊಸ ಬಾಂಬ್

Webdunia
ಸೋಮವಾರ, 27 ಮೇ 2019 (17:00 IST)
ಕಾಂಗ್ರೆಸ್ ನ ಕೆಲವು ನಾಯಕರು ಬಿಜೆಪಿಯ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿರುವ ಬೆನ್ನಲ್ಲೇ, ನನಗೂ ಎಸ್ ಎಂ ಕೆ ಕರೆ ಮಾಡಿದ್ದರು ಅಂತ ಗೃಹ ಸಚಿವರು ಹೊಸ ಬಾಂಬ್ ಸಿಡಿಸಿದ್ದಾರೆ.

ವಿಧಾನಸೌಧದಲ್ಲಿ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದು, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ವ್ಯತ್ಯಾಸವಿದೆ. ಪುಲ್ವಾಮ ಸೇರಿ ಇತರ ಅವಕಾಶಗಳು ಬಿಜೆಪಿ ಯಶಸ್ವಿಗೆ ಕಾರಣವಾಗಿವೆ. ಸೋಲಿಗೆ ಯಾವುದೇ ಕಾರಣಗಳಿರಬಹುದು. ಆದರೆ ಜನರ ತೀರ್ಪನ್ನ ನಾವು ಒಪ್ಪಿಕೊಳ್ಳಬೇಕು ಎಂದರು. ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ರಾಜಸ್ತಾನ ಸೇರಿ ಇತರ ಕಡೆಗಳಲ್ಲೂ ಸೋಲಾಗಿದೆ. ಆದರೆ ಇದರಿಂದ ಮೈತ್ರಿ ಸರ್ಕಾರಕ್ಕೇನು ಅಪಾಯವಿಲ್ಲ ಎಂದರು.

ಇನ್ನು ಎಸ್.ಎಂ.ಕೃಷ್ಣರನ್ನು ಕಾಂಗ್ರೆಸ್ ನಾಯಕರು ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಸ್.ಎಂ.ಕೃಷ್ಣರು ನಮ್ಮ ನಾಯಕರಾಗಿದ್ದವರು. ರಾಜಕೀಯ ಹೊರತು ಪಡಿಸಿ ಭೇಟಿ ಮಾಡಿದ್ದಾರೆ. ನನಗೂ ಎಸ್ ಎಂಕೆ ಕರೆ ಮಾಡಿ ಮಾತನಾಡಿದ್ದರು. ಹಾಗಂತ ಬೇರೆ ಅರ್ಥ ಕಲ್ಪಿಸೋಕೆ ಸಾಧ್ಯವೇ? ಎಂದರು.

ಬಿಜೆಪಿ ನಾಯಕರು ನನ್ನನ್ನ ಭೇಟಿ ಮಾಡಿದ್ದರು. ಹಾಗಂತ ಅವರು ಕಾಂಗ್ರೆಸ್ ಗೆ ಬರುತ್ತಾರೆ ಅಂತ ಅರ್ಥವೇ? ಎಲ್ಲವೂ ಊಹಾಪೋಹ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

ಮೋದಿ ವಿರುದ್ಧ ಸದಾ ಕೆಂಡಕಾರುತ್ತಿದ್ದ ಸಂಜಯ್ ರಾವತ್ ಗೆ ಏನಾಗಿದೆ ನೋಡಿ: ಗಂಭೀರ ಸಮಸ್ಯೆಯಲ್ಲಿ ನಾಯಕ

ಡೆಡ್‍ಲೈನ್ ಸಾಯುತ್ತಿದೆಯೇ ಹೊರತು ಅಭಿವೃದ್ಧಿ ಆಗುತ್ತಿಲ್ಲ: ಶೋಭಾ ಕರಂದ್ಲಾಜೆ

ಕನ್ನಡ ಅತ್ಯಂತ ಪ್ರಾಚೀನ ಭಾಷೆ: ಶೋಭಾ ಕರಂದ್ಲಾಜೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments