Webdunia - Bharat's app for daily news and videos

Install App

ನಾಲ್ಕು ತಿಂಗಳ ಬಳಿಕ ಆಸ್ಪತ್ರೆಯಿಂದ ಎಸ್‌ಎಂ ಕೃಷ್ಣ ಡಿಸ್ಚಾರ್ಜ್, ಹೆಲ್ತ್‌ ಡಿಟೇಲ್ಸ್‌ ಹೀಗಿದೆ

Sampriya
ಬುಧವಾರ, 28 ಆಗಸ್ಟ್ 2024 (19:13 IST)
Photo Courtesy X
ಬೆಂಗಳೂರು:  ಏಪ್ರಿಲ್‌ನಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ವಯೋಸಹಜ ಕಾಯಿಲೆಯಿಂದ ದಾಖಲಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್‌. ಎಂ. ಕೃಷ್ಣ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ವೈದ್ಯರು ಅವರಿಗೆ ಪೂರ್ಣ ಪ್ರಮಾಣದ ವಿಶ್ರಾಂತಿಗೆ ಸಲಹೆ ಮಾಡಿದ್ದಾರೆ. ಬುಧವಾರ ಸಂಜೆ ಮಣಿಪಾಲ್ ಆಸ್ಪತ್ರೆಯಿಂದ ಎಸ್. ಎಂ. ಕೃಷ್ಣ (92)ಅವರು ಡಿಸ್ಚಾರ್ಜ್ ಆಗಿದ್ದಾರೆ.

ಶ್ವಾಸಕೋಶ ಸೋಂಕಿನ ಕಾರಣಕ್ಕೆ ಎಸ್. ಎಂ. ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರ ಆರೋಗ್ಯ ಸುಧಾರಿಸಿದ್ದರಿಂದ ಇಂದು ವೈದ್ಯರು ಡಿಸ್ಚಾರ್ಜ್ ಮಾಡುವಂತೆ ಸೂಚಿಸಿದ್ದಾರೆ. ಇನ್ನೂ ಆರೋಗ್ಯದ ದೃಷ್ಟಿಯಿಂದ ಎರಡು ವಾರಗಳ ಕಾಲ ಯಾರೂ ಎಸ್‌ ಎಂ ಕೃಷ್ಣ ಭೇಟಿಗೆ ಬರಬಾರದು ಎಂದು  ಎಂಎಲ್‌ಸಿ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್. ಎಂ. ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಬಳಿಕ ಮಣಿಪಾಲ್ ಆಸ್ಪತ್ರೆಗೆ ಏಪ್ರಿಲ್ 29ರಂದು ದಾಖಲಿಸಲಾಯಿತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments