Webdunia - Bharat's app for daily news and videos

Install App

ಅಂತಿಮ ಯಾತ್ರೆ ವೇಳೆ ಎಸ್ಎಂ ಕೃಷ್ಣ ಪಕ್ಕವೇ ಸೋಫಾ ಮೇಲೆ ಕುಳಿತ ಡಿಕೆ ಶಿವಕುಮಾರ್

Krishnaveni K
ಬುಧವಾರ, 11 ಡಿಸೆಂಬರ್ 2024 (12:05 IST)
ಮದ್ದೂರು: ತಮ್ಮ ರಾಜಕೀಯ ಗುರು ಎಸ್ಎಂ ಕೃಷ್ಣ ಸಾವು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ತೀರಾ ಕುಗ್ಗಿಸಿದೆ. ನಿನ್ನೆಯಿಂದ ಎಸ್ಎಂ ಕೃಷ್ಣ ಪಕ್ಕವೇ ಇದ್ದ ಡಿಕೆ ಶಿವಕುಮಾರ್ ಇಂದು ಅಂತಿಮ ಯಾತ್ರೆ ವೇಳೆಯೂ ಮೃತದೇಹ ಸಾಗಿಸುತ್ತಿರುವ ವಾಹನದಲ್ಲೇ ಸೋಫಾ ಮೇಲೆ ಕೂತು ಸಾಥ್ ನೀಡಿದ್ದಾರೆ.

ಎಸ್ಎಂ ಕೃಷ್ಣ ನನ್ನ ತಂದೆ ಸಮಾನರು. ಅವರನ್ನು ಗೌರವದಿಂದ ಕಳುಹಿಸಿಕೊಡುವುದು ನಮ್ಮ ಕರ್ತವ್ಯ ನಿನ್ನೆಯೇ ಡಿಕೆಶಿ ಹೇಳಿದ್ದರು. ಅದರಂತೆ ನಿನ್ನೆಯಿಂದ ಅವರ ಅಂತಿಮ ವಿಧಿ ವಿಧಾನ ನಡೆಸುವ ಎಲ್ಲಾ ಪ್ರಕ್ರಿಯೆಗಳ ಮೇಲ್ವಿಚಾರಣೆಯನ್ನು ತಾವೇ ಹೊತ್ತುಕೊಂಡಿದ್ದಾರೆ.

ಇಂದು ಬೆಂಗಳೂರಿನ ನಿವಾಸದಿಂದ ಹೊರಡುವ ಮುನ್ನ ಸ್ವಾಮೀಜಿಗಳ ನಿರ್ದೇಶನದಂತೆ ಎಸ್ಎಂಕೆ ಮೃತದೇಹಕ್ಕೆ ಪೂಜೆ ಮಾಡಿದ್ದರು. ಬಳಿಕ ಅಂತಿಮ ಯಾತ್ರೆಯ ವಾಹನದಲ್ಲಿ ವ್ಯವಸ್ಥೆ ಮಾಡಲಾಗಿರುವ ವಿಶೇಷ ಸೋಫಾ ಮೇಲೆ ಕುಳಿತು ಗುರುವಿನ ಜೊತೆಗೇ ತೆರಳಿದ್ದಾರೆ. ರಸ್ತೆಯಲ್ಲಿ ಸಾಕಷ್ಟು ಜನ ಸೇರಿದ್ದು, ಅವರನ್ನು ತೆರವುಗೊಳಿಸುತ್ತಾ ವಾಹನ ಸುಗಮವಾಗಿ ತೆರಳಲು ನಿರ್ದೇಶನವನ್ನೂ ನೀಡುತ್ತಿದ್ದುದು ಕಂಡುಬಂದಿದೆ.

ಇಂದು ಸಂಜೆ 3 ಗಂಟೆ ನಂತರ ಎಸ್ಎಂಕೆ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಗಳೂ ನಡೆದಿವೆ. ಈ ವೇಳೆ ಸಾಕಷ್ಟು ರಾಜಕೀಯ ಗಣ್ಯರೂ ಭಾಗಿಯಾಗುವ ನಿರೀಕ್ಷೆಯಿದೆ. ಇದೀಗ ಅಂತಿಮ ಯಾತ್ರೆ ವೇಳೆಯೂ ಸಾಕಷ್ಟು ಸಂಖ್ಯೆಯಲ್ಲಿ ಜನ ಬಂದು ಅಂತಿಮ ದರ್ಶನ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments