Webdunia - Bharat's app for daily news and videos

Install App

ಆಧುನಿಕ ಬೆಂಗಳೂರಿನ ನಿರ್ಮಾತೃಗೆ ಅಂತಿಮ ವಿದಾಯ: ಎಸ್ಎಂ ಕೃಷ್ಣ ಅಂತಿಮ ಕ್ರಿಯೆ ಹೀಗಿತ್ತು

Krishnaveni K
ಬುಧವಾರ, 11 ಡಿಸೆಂಬರ್ 2024 (17:23 IST)
ಮದ್ದೂರು: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಇಂದು ಸೋಮನಹಳ್ಳಿಯ ತಮ್ಮ ಹುಟ್ಟೂರಿನ ಮಣ್ಣಲ್ಲಿ ಮಣ್ಣಾಗಿ ಹೋದರು. ಅವರ ಅಂತಿಮ ಕ್ರಿಯೆಯನ್ನು ಮೊಮ್ಮಗ ಅಮರ್ಥ್ಯ ಹೆಗ್ಡೆ ನೆರವೇರಿಸಿದರು.

ಬೆಂಗಳೂರಿನಿಂದ ಇಂದು ಸೋಮನಹಳ್ಳಿಗೆ ಎಸ್ಎಂ ಕೃಷ್ಣ ಮೃತದೇಹವನ್ನು ಅಂತಿಮ ಯಾತ್ರೆ ಮೂಲಕ ಕರೆತರಲಾಯಿತು. ಬಳಿಕ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರೀ ಗೌರವಗಳೊಂದಿಗೆ ಅವರ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು. ಮೊಮ್ಮಗ ಅಮರ್ಥ್ಯ ಕಾರ್ಯಕ್ರಗಳನ್ನು ನೆರವೇರಿಸಿದರು.

ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ಕ್ರಿಯೆಗಳು ನೆರವೇರಿದವು. ಸರ್ಕಾರೀ ಗೌರವದ ಬಳಿಕ ರಾಷ್ಟ್ರಧ್ವಜವನ್ನು ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಹಸ್ತಾಂತರಿಸಿದರು. ಬಳಿಕ ಎಸ್ಎಂ ಕೃಷ್ಣ ಮೃತದೇಹವನ್ನು ಹೂವಿನ ಪಲ್ಲಕ್ಕಿಯಲ್ಲಿ ಕರೆತಂದು ಗಂಧದ ತುಂಡುಗಳಿಂದ ಸಿದ್ಧಪಡಿಸಿದ್ದ ಚಿತೆಯ ಮೇಲಿರಿಸಲಾಯಿತು.

ಬಳಿಕ ಕುಟುಂಬಸ್ಥರು ಕೊನೆಯ ಬಾರಿಗೆ ಅವರ ಮುಖ ನೋಡಿ ನಮನ ಸಲ್ಲಿಸಿದರು. ಬಳಿಕ ಅಮರ್ಥ್ಯ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ಕ್ರಿಯೆ ನೆರವೇರಿಸಿದರು. ಅಂತಿಮ ಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹಸಚಿವ ಪರಮೇಶ್ವರ್, ಸಚಿವ ಚೆಲುವರಾಯಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಎಚ್ ಡಿ ಕುಮಾರಸ್ವಾಮಿ, ಸಂಸದ ಡಾ ಸಿ ಸುಧಾಕರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments