Webdunia - Bharat's app for daily news and videos

Install App

ಬಿಜೆಪಿ ಪರಿವರ್ತನಾ ಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಳ್ಳದ ಎಸ್.ಎಂ.ಕೃಷ್ಣ

Webdunia
ಶುಕ್ರವಾರ, 19 ಜನವರಿ 2018 (13:25 IST)

ಬಿಜೆಪಿ ಪರಿವರ್ತನಾ ಯಾತ್ರೆ ಮಂಡ್ಯ ಜಿಲ್ಲೆಯ ಮದ್ದೂರಿನ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರು ಮೆರವಣಿಗೆಯಲ್ಲಿ ಪಾಲ್ಗೊಳ್ಳದೆ ಕಾರ್ಯಕರ್ತರಿಗೆ ನಿರಾಸೆ ಮೂಡಿಸಿದ್ದಾರೆ.

ತೆರದ ವಾಹನದಲ್ಲಿ ಮೆರವಣಿಗೆ ನಡೆಸಲು ಎಲ್ಲ ಸಿದ್ದತೆ ಮಾಡಿಕೊಂಡು ಗಂಟೆಗಳ ಕಾಲ ಕಾರ್ಯಕರ್ತರು ಕಾಯುತ್ತಿದ್ದರು. ಆದರೆ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಮೆರವಣಿಗೆಯಲ್ಲಿ ಪಾಲ್ಗೊಂಡಿಲ್ಲ.

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇಲ್ಲದೆ ಪರಿವರ್ತನಾ ಯಾತ್ರೆ ನಡೆಸಲಾಗಿದ್ದು, ಈ ಇಬ್ಬರೂ ನಾಯಕರು ನೇರವಾಗಿ ವೇದಿಕೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಆದರೆ, ಮೆರವಣಿಗೆಯಲ್ಲಿ ಪಾಲ್ಗೊಳ್ಳದೆ ಎಸಿ ಹೋಟಲಿನಲ್ಲಿ ತಿಂಡಿ ತಿನ್ನುತ್ತಾ ಕುಳಿತಿದ್ದರು ಎನ್ನಲಾಗಿದೆ.

ಮೆರವಣಿಗೆಯಲ್ಲಿ ಈ ನಾಯಕರು ಭಾಗವಹಿಸದಿರುವುದು ಸ್ವಲ್ಪ ಮಟ್ಟಿಗೆ ಕಾರ್ಯಕರ್ತರಿಗೆ ನಿರಾಸೆ ಮೂಡಿಸಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments