Select Your Language

Notifications

webdunia
webdunia
webdunia
webdunia

ಮತ್ತೆ ಸಕ್ರೀಯ ರಾಜಕಾರಣಕ್ಕೆ ಇಳಿಯಲಿರುವ ಎಸ್.ಎಂ.ಕೃಷ್ಣ

ಮತ್ತೆ ಸಕ್ರೀಯ ರಾಜಕಾರಣಕ್ಕೆ ಇಳಿಯಲಿರುವ ಎಸ್.ಎಂ.ಕೃಷ್ಣ
ಬೆಂಗಳೂರು , ಮಂಗಳವಾರ, 9 ಜನವರಿ 2018 (19:18 IST)

ರಾಜಕೀಯ ಚಟುವಟಿಕೆಯಿಂದ ದೂರ ಉಳಿದಿರುವ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರು ಸಕ್ರೀಯ ರಾಜಕಾರಣಕ್ಕೆ ಇಳಿಯಲಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಎಸ್.ಎಂ.ಕೃಷ್ಣ ಅವರು ಮಂಡ್ಯದಲ್ಲಿ ಜನವರಿ 19ರಂದು ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಿನಲ್ಲಿ 28ರಂದು ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಜೊತೆಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸಿರುವುದರಿಂದ ಎಸ್.ಎಂ.ಕೃಷ್ಣ ಅವರ ಅನುಭವವನ್ನು ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಈಗಾಗಲೇ ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆದಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ನರೇಂದ್ರಮೋದಿ ಮೆಚ್ಚುಗೆಗೆ ಪಾತ್ರರಾದ ರತ್ನಪ್ರಭಾ ಕಾರ್ಯ