Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕರೊಳಗೆ ಮುಸುಕಿನ ಗುದ್ದಾಟವಿರುವುದು ನಿಜ ಎಂದ ಸದಾನಂದಗೌಡರು

ಬಿಜೆಪಿ ನಾಯಕರೊಳಗೆ ಮುಸುಕಿನ ಗುದ್ದಾಟವಿರುವುದು ನಿಜ ಎಂದ ಸದಾನಂದಗೌಡರು
ಮಂಗಳೂರು , ಮಂಗಳವಾರ, 17 ಜನವರಿ 2017 (14:23 IST)
ರಾಜ್ಯ ಬಿಜೆಪಿ ನಾಯಕರೊಳಗೆ ಮುಸುಕಿನ ಗುದ್ದಾಟವಿರುವುದು ನಿಜ. ಈ ಗುದ್ದಾಟ ಶೀಘ್ರದಲ್ಲಿಯೇ ಬಗೆಹರಿಯಲಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಕೆಲವರು ದೊಡ್ಡ ಮಟ್ಟದಲ್ಲಿ ಬಿಂಬಿಸುತ್ತಿದ್ದಾರೆ. ಆದರೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅಭಿಪ್ರಾಯಪಟ್ಟರು. 
 
ಪಂಚ ರಾಜ್ಯಗಳ ಚುನಾವಣೆ ಸಮೀಪಿಸುತ್ತಿದೆ. ದೇಶದಲ್ಲೆಡಿ ಬಿಜೆಪಿಗೆ ಅನುಕೂಲಕರ ವಾತಾವರಣ ಇದೆ. ಪ್ರಧಾನಿ ಮೋದಿ ಅವರು ಭ್ರಷ್ಟಾಚಾರ ಮುಕ್ತ ಆಡಳಿತ ಹಾಗೂ ಅವರು ತಂದ ಯೋಜನೆಗಳನ್ನು ಜನಸಾಮಾನ್ಯರು ಸ್ವಾಗತಿಸಿದ್ದಾರೆ ಎಂದರು. 
 
ದೇಶಾದ್ಯಂತ 500, 1000 ಮುಖಬೆಲೆಯ ನೋಟು ನಿಷೇಧ ಬಳಿಕ ಪ್ರಧಾನಿ ಮೋದಿ ಅವರು 50 ದಿನಗಳ ಕಾಲಾವಕಾಶ ಕೇಳಿದ್ದರು. ಅದರಂತೆ, ಅವರು ಜನತೆಗೆ ನೀಡಿದ ಭರವಸೆ ಪ್ರಕಾರ ಅಲ್ಪಾವಧಿಯಲ್ಲಿಯೇ ಸುಧಾರಣೆ ಕಂಡಿದೆ. ಭವಿಷದಲ್ಲಿ ಇದರ ಹೆಚ್ಚಿನ ಪ್ರಯೋಜನೆ ಜನತೆಗೆ ನಿಚ್ಚಳವಾಗಲಿದೆ ಕೇಂದ್ರ ಸಚಿವ ಸದಾನಂದಗೌಡ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶಶಿಕಲಾ ವಿರುದ್ಧ ತೊಡೆ ತಟ್ಟಿ ನಿಂತ ದೀಪಾ