Webdunia - Bharat's app for daily news and videos

Install App

ಬಿಜೆಪಿ ನಾಯಕರೊಳಗೆ ಮುಸುಕಿನ ಗುದ್ದಾಟವಿರುವುದು ನಿಜ ಎಂದ ಸದಾನಂದಗೌಡರು

Webdunia
ಮಂಗಳವಾರ, 17 ಜನವರಿ 2017 (14:23 IST)
ರಾಜ್ಯ ಬಿಜೆಪಿ ನಾಯಕರೊಳಗೆ ಮುಸುಕಿನ ಗುದ್ದಾಟವಿರುವುದು ನಿಜ. ಈ ಗುದ್ದಾಟ ಶೀಘ್ರದಲ್ಲಿಯೇ ಬಗೆಹರಿಯಲಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಕೆಲವರು ದೊಡ್ಡ ಮಟ್ಟದಲ್ಲಿ ಬಿಂಬಿಸುತ್ತಿದ್ದಾರೆ. ಆದರೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅಭಿಪ್ರಾಯಪಟ್ಟರು. 
 
ಪಂಚ ರಾಜ್ಯಗಳ ಚುನಾವಣೆ ಸಮೀಪಿಸುತ್ತಿದೆ. ದೇಶದಲ್ಲೆಡಿ ಬಿಜೆಪಿಗೆ ಅನುಕೂಲಕರ ವಾತಾವರಣ ಇದೆ. ಪ್ರಧಾನಿ ಮೋದಿ ಅವರು ಭ್ರಷ್ಟಾಚಾರ ಮುಕ್ತ ಆಡಳಿತ ಹಾಗೂ ಅವರು ತಂದ ಯೋಜನೆಗಳನ್ನು ಜನಸಾಮಾನ್ಯರು ಸ್ವಾಗತಿಸಿದ್ದಾರೆ ಎಂದರು. 
 
ದೇಶಾದ್ಯಂತ 500, 1000 ಮುಖಬೆಲೆಯ ನೋಟು ನಿಷೇಧ ಬಳಿಕ ಪ್ರಧಾನಿ ಮೋದಿ ಅವರು 50 ದಿನಗಳ ಕಾಲಾವಕಾಶ ಕೇಳಿದ್ದರು. ಅದರಂತೆ, ಅವರು ಜನತೆಗೆ ನೀಡಿದ ಭರವಸೆ ಪ್ರಕಾರ ಅಲ್ಪಾವಧಿಯಲ್ಲಿಯೇ ಸುಧಾರಣೆ ಕಂಡಿದೆ. ಭವಿಷದಲ್ಲಿ ಇದರ ಹೆಚ್ಚಿನ ಪ್ರಯೋಜನೆ ಜನತೆಗೆ ನಿಚ್ಚಳವಾಗಲಿದೆ ಕೇಂದ್ರ ಸಚಿವ ಸದಾನಂದಗೌಡ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments