Webdunia - Bharat's app for daily news and videos

Install App

ವಿಜಯಪುರದ ಡ್ಯಾಂ ಮೇಲೆ ವಿಮಾನ ಹಾರಾಟ: ಆತಂಕಗೊಂಡ ಜನತೆ

Webdunia
ಗುರುವಾರ, 23 ಮಾರ್ಚ್ 2017 (14:05 IST)
ಆಲಮಟ್ಟಿ ಡ್ಯಾಂ ಮೇಲೆ ಸಣ್ಣ ಗಾತ್ರದ ವಿಮಾನ ಹಾರಾಡುತ್ತಿರುವುದನ್ನು ನೋಡಿದ ಜನತೆ ಆತಂಕಗೊಂಡು ಪೊಲೀಸರಿಗೆ ದೂರು ನೀಡಿದ ಘಟನೆ ವರದಿಯಾಗಿದೆ.
 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ರಾಮಪ್ಪ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬೀದರ್ ವಾಯುಸೇನಾ ನೆಲೆಯ ತರಬೇತಿಯ ವಿಮಾನ ಇದಾಗಿದ್ದು ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.
 
ಬೀದರ್ ವಾಯುಸೇನೆಯ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದಾಗ ವಾಯುಸೇನೆ ವಿಮಾನ ಹಾರಾಟ ನಡೆಸುತ್ತಿದೆ ಗಾಬರಿಯಾಗುವ ಅವಶ್ಯಕತೆಯಿಲ್ಲ ಎಂದು ತಿಳಿಸಿದ್ದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ರಾಮಪ್ಪ ವಿವರಣೆ ನೀಡಿದ್ದಾರೆ.
 
ಇಂದು ಬೆಳಿಗ್ಗೆ ಆಲಮಟ್ಟಿ ಡ್ಯಾಂ ಮೇಲೆ ಸಣ್ಣಗಾತ್ರದ ವಿಮಾನ ಹಾರಾಡುತ್ತಿರುವುದನ್ನು ನೋಡಿದ ಸ್ಥಳೀಯರು ಇದೊಂದು ಉಗ್ರ ಕೃತ್ಯವೋ, ಉಗ್ರರು ಡ್ಯಾಂ ಮೇಲೆ ದಾಳಿ ಮಾಡುತ್ತಿದ್ದಾರೆಯೇ ಎನ್ನುವ ಆತಂಕ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments