Webdunia - Bharat's app for daily news and videos

Install App

ಏಳು ಸ್ಮಾರ್ಟ್ ಸಿಟಿ ಶೀಘ್ರವಾಗಿ ಸಿದ್ದ

Webdunia
ಸೋಮವಾರ, 24 ಜನವರಿ 2022 (14:44 IST)
ರಾಜ್ಯದ ಎಲ್ಲ ಏಳು ಸ್ಮಾರ್ಟ್‌ ಸಿಟಿ ಕಾಮಗಾರಿಗಳು 2023ರ ಜುಲೈ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಗಡುವು ನೀಡಿದ್ದು, ಆದರೆ 2023 ರ ಮಾರ್ಚ್‌ಗೆ ಪೂರ್ಣಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದ್ದಾರೆ.
ಏಳು ಸ್ಮಾರ್ಟ್‌ ಸಿಟಿಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 2020 ರ ಫೆಬ್ರುವರಿ ವೇಳೆಗೆ ₹855 ಕೋಟಿ ಕಾಮಗರಿಗಳು ನಡೆದಿದ್ದವು. ಅಲ್ಲಿಂದ ಈಚೆಗೆ ₹2646 ಕೋಟಿ ವೆಚ್ಚದ ಕಾಮಗಾರಿಗಳು ನಡೆದಿವೆ ಎಂದರು.
 
ನಾನು ನಗರಾಭಿವೃದ್ಧಿ ಇಲಾಖೆ ಸಚಿವನಾದ ಬಳಿಕ ರಾಜ್ಯದ ಸ್ಮಾರ್ಟ್‌ ಸಿಟಿಗಳ ಕಾಮಗಾರಿಗಳ ವೀಕ್ಷಣೆ ಮತ್ತು ಪ್ರಗತಿ ಪರಿಶೀಲನೆಗಾಗಿ ಪ್ರತಿ ನಗರಕ್ಕೆ 8 ರಿಂದ 10 ಬಾರಿ ಭೇಟಿ ನೀಡಿದ್ದೇನೆ. ಕಾಮಗಾರಿಗಳ ವೇಗ ಹೆಚ್ಚಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಂಡಿರುವುದೂ ಅಲ್ಲದೆ, ಗುಣಮಟ್ಟ ನಿಯಂತ್ರಣ ಪರಿಶೀಲನಾ ತಂಡವೂ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
 
ಸ್ಮಾರ್ಟ್‌ ಸಿಟಿ ಕಾಮಗಾರಿಗಳ ಟೆಂಡರ್ ಕರೆಯುವುದರಲ್ಲಿ ಕರ್ನಾಟಕ 2 ನೇ ಸ್ಥಾನದಲ್ಲಿದೆ ಮತ್ತು ಕಾಮಗಾರಿಗಳಿಗೆ ಕಾರ್ಯಾದೇಶ ನೀಡುವಲ್ಲಿ 4ನೇ ಸ್ಥಾನದಲ್ಲಿದೆ. ಕೊರೊನಾ, ಲಾಕ್‌ಡೌನ್, ಕಾರ್ಮಿಕರ ವಲಸೆ ಮುಂತಾದ ಸಮಸ್ಯೆಗಳನ್ನು ಎದುರಿಸಿದ್ದರೂ ಕಾಮಗಾರಿಗಳಿಗೆ ಹೆಚ್ಚಿನ ಹಣಕಾಸಿನ ವೆಚ್ಚ ಏರಿಕೆಯಾಗಿಲ್ಲ. ಬದಲಾಗಿ ಕಾಮಗಾರಿಗಳು ಪೂರ್ಣಗೊಳ್ಳುವುದರ ಕಾಲ ಮಿತಿ ಹೆಚ್ಚಾಗಿತ್ತು. ಹೀಗಿದ್ದರೂ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು.
 
ಮೈಸೂರು, ಬಳ್ಳಾರಿ, ಕಲಬುರಗಿ ಮತ್ತು ವಿಜಯಪುರವನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಸೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ. ಇದರ ಜತೆಗೆ ಇತ್ತೀಚೆಗೆ ಉತ್ತರಪ್ರದೇಶದ ಲಕ್ನೋಗೆ ತೆರಳಿದ್ದ ವೇಳೆ ಕೇಂದ್ರ ವಸತಿ ಮತ್ತು ನಗರಾಭಿವೃದ್ದಿ ಸಚಿವ ಹರದೀಪ್‌ ಸಿಂಗ್ ಪುರಿ ಅವರ ಜತೆ ಮಾತನಾಡಿದ್ದೇನೆ ಎಂದು ಬಸವರಾಜ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ ಚೆಕ್‌ಪೋಸ್ಟ್‌ನಲ್ಲಿ ಲಂಚಕ್ಕೆ ಕಾಯುತ್ತಿದ್ದ ಅಧಿಕಾರಿಗಳಿಗೆ ಬುದ್ಧಿ ಕಲಿಸಿದ ಲಾರಿ ಡ್ರೈವರ್: Video

ಕನ್ನಡ ಮಾತನಾಡಲು ನಿರಾಕರಿಸಿದ್ದಲ್ಲದೆ ಹೂಡಿಕೆದಾರರಿಗೇ ಆವಾಜ್ ಹಾಕಿದ ಮಹಿಳೆ Video

ಪ್ರವಾಹದಲ್ಲಿ ಸಿಲುಕಿದ್ದ ಯುವಕನ ನೋಡಿ ಆನೆ ಮಾಡಿದ ಕೆಲಸವೇನು ನೋಡಿ video

ವಿದ್ಯುತ್ ಕಂಬಕ್ಕೆ ಸುತ್ತು ಹಾಕಿ ಹಕ್ಕಿಗಳನ್ನು ತಿನ್ನಲು ಹೋದ ಬೃಹತ್ ಹೆಬ್ಬಾವಿನ ಕತೆ ಏನಾಯ್ತು ನೋಡಿ Video

ಕಾಡಿನ ನಡುವೆ ರೈಲು ಪ್ರಯಾಣಿಸುವಾಗ ಡೋರ್ ತೆಗೆದು ಮಲಗಿದ್ದೇ ತಪ್ಪಾಯ್ತು: ಊಹಿಸಲೂ ಆಗದ ಘಟನೆಯ Video

ಮುಂದಿನ ಸುದ್ದಿ
Show comments