Webdunia - Bharat's app for daily news and videos

Install App

ಎಸ್‌.ಎಂ.ಕೃಷ್ಣ ಬಿಜೆಪಿ ಸೇರ್ಪಡೆ ಕೇವಲ ವದಂತಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Webdunia
ಬುಧವಾರ, 1 ಫೆಬ್ರವರಿ 2017 (17:10 IST)
ಕಾಂಗ್ರೆಸ್ ಪಕ್ಷ ತೊರೆದಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ಪಕ್ಷ ಸೇರುತ್ತಾರೆ ಎನ್ನುವುದು ಕೇವಲ ಊಹಾಪೋಹ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
 
ಕೊಪ್ಪಳ್ಳ ಜಿಲ್ಲೆಯ ಬಸಾಪುರ ಬಳಿ ಇರುವ ಖಾಸಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅವರಿಗೆ ಪಕ್ಷ ಎಲ್ಲವನ್ನು ನೀಡಿದೆ ಎಂದು ಅವರೇ ಹೇಳಿದ್ದಾರೆ. ಈಗ ಪಕ್ಷ ತೊರೆದಿರುವ ಅವರು ತಪ್ಪು ದಾರಿಯಲ್ಲಿ ಸಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.
 
ಎಸ್.ಎಂ.ಕೃಷ್ಣ ಬಿಜೆಪಿ ಪಕ್ಷ ಸೇರುತ್ತಾರೆ ಎನ್ನುವುದು ಕೇವಲ ಊಹಾಪೋಹ. ಅವರ ಮನವೊಲಿಸಿ ಮರಳಿ ಪಕ್ಷಕ್ಕೆ ಕರೆತರಲು ಕಾಂಗ್ರೆಸ್ ಮುಖಂಡರು ಪ್ರಯತ್ನ ನಡೆಸಿದ್ದಾರೆ ಎಂದು ಹೇಳಿದರು. 
 
ಬೇಸಿಗೆ ಕಾಲದಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ. ರಾಯಚೂರು ಶಾಖೋತ್ಪನ್ನ ವಿದ್ಯುತ್ ಘಟಕ ಪದೇ ಪದೇ ರಿಪೇರಿಗೆ ಬರುತ್ತಿದೆ. ಈ ಘಟಕವನ್ನು ಅಧುನೀಕರಣಗೊಳಿಸಲು ಯೋಜನೆ ಸಿದ್ಧವಾಗುತ್ತಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments