ಧಂ ಹೊಡೆಯೋದು ಬೇಡ ಅಂತಿದ್ದಾರೆ ಡಿಸಿಎಂ!

Webdunia
ಶುಕ್ರವಾರ, 4 ಜನವರಿ 2019 (18:51 IST)
ರಾಜ್ಯ ವ್ಯಾಪ್ತಿ ಧೂಮಪಾನ ಸೇವನೆಯನ್ನು ಸಂಪೂರ್ಣ ನಿಷೇಧ ಮಾಡುವ ಸಂಬಂಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ, ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.

ಬೆಂಗಳೂರು ನಗರದಲ್ಲಿಂದು ಮಲ್ಲೇಶ್ವರ ಬಿಬಿಎಂಪಿ ಕಚೇರಿಯಲ್ಲಿ ಧೂಮಪಾನ ಮುಕ್ತ ಬೆಂಗಳೂರು ಅಭಿಯಾನದ ವರದಿ ಹಾಗೂ ಮೊಬೈಲ್ ಆಫ್ ಬಿಡುಗಡೆ ಮಾಡಿ ಮಾತನಾಡಿದರು.

ಗುಜರಾತ್ ರಾಜ್ಯದಲ್ಲಿ ಲಿಕ್ಕರ್ ಬ್ಯಾನ್ ಮಾಡುವ ಮೂಲಕ ಜಾಗೃತಿ ಮೂಡಿಸಿದ್ದಾರೆ. ಅದೇ ರೀತಿ ಕರ್ನಾಟಕದಲ್ಲೂ ಸಿಗರೇಟು ಸೇವನೆ ಬ್ಯಾನ್ ಮಾಡಬಹುದೇ ಪರಿಶೀಲಿಸಿ. ಇನ್ನೂ, ಇದರಿಂದ ಪೊಲೀಸರಿಗೆ ಹೆಚ್ಚು ಶ್ರಮ ಆಗಬಹುದು. ಆದರೆ ಜನರಲ್ಲಿ ಪ್ರಬಲವಾಗಿ ಅರಿವು ಮೂಡಿಸಲು ಸಹಕಾರಿಯಾಗಲಿದೆ ಎಂದರು.

ಡ್ರಗ್ ನಿಯಂತ್ರಣ ಮಾಡಲು ರಾಜ್ಯದೆಲ್ಲೆಡೆ ದೊಡ್ಡ ಮಟ್ಟದ ಅಭಿಯಾನ ಮಾಡಲಾಗುತ್ತಿದೆ. ಅದರಲ್ಲೂ ಕಾಲೇಜು ಆವರಣಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಅಭಿಯಾನ ಯಶಸ್ವಿಯಾಗಿದೆ.

ಅಭಿಯಾನದಲ್ಲೇ ಸಿಗರೇಟು ಸೇವನೆ ಸೇರಿಸಿ, ಕನಿಷ್ಠ ಪಕ್ಷ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇವನೆಯಿಂದ ದೂರ ಉಳಿಯುವಂತೆ ಮಾಡಬೇಕಿದೆ. ಕಾಲೇಜು ಸಮೀಪ ಸಿಗರೇಟು ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಿಸಿ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮಗು ಹಿಡಿದುಕೊಂಡು ನಿಂತಿದ್ದ ಮಹಿಳೆ ಖಾಸಗಿ ಅಂಗಾಂಗ ಸ್ಪರ್ಶಿಸುತ್ತಿದ್ದ ವ್ಯಕ್ತಿ: ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ Video

ಮುಂದಿನ ಸುದ್ದಿ
Show comments