Webdunia - Bharat's app for daily news and videos

Install App

ಧಂ ಹೊಡೆಯೋದು ಬೇಡ ಅಂತಿದ್ದಾರೆ ಡಿಸಿಎಂ!

Webdunia
ಶುಕ್ರವಾರ, 4 ಜನವರಿ 2019 (18:51 IST)
ರಾಜ್ಯ ವ್ಯಾಪ್ತಿ ಧೂಮಪಾನ ಸೇವನೆಯನ್ನು ಸಂಪೂರ್ಣ ನಿಷೇಧ ಮಾಡುವ ಸಂಬಂಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ, ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.

ಬೆಂಗಳೂರು ನಗರದಲ್ಲಿಂದು ಮಲ್ಲೇಶ್ವರ ಬಿಬಿಎಂಪಿ ಕಚೇರಿಯಲ್ಲಿ ಧೂಮಪಾನ ಮುಕ್ತ ಬೆಂಗಳೂರು ಅಭಿಯಾನದ ವರದಿ ಹಾಗೂ ಮೊಬೈಲ್ ಆಫ್ ಬಿಡುಗಡೆ ಮಾಡಿ ಮಾತನಾಡಿದರು.

ಗುಜರಾತ್ ರಾಜ್ಯದಲ್ಲಿ ಲಿಕ್ಕರ್ ಬ್ಯಾನ್ ಮಾಡುವ ಮೂಲಕ ಜಾಗೃತಿ ಮೂಡಿಸಿದ್ದಾರೆ. ಅದೇ ರೀತಿ ಕರ್ನಾಟಕದಲ್ಲೂ ಸಿಗರೇಟು ಸೇವನೆ ಬ್ಯಾನ್ ಮಾಡಬಹುದೇ ಪರಿಶೀಲಿಸಿ. ಇನ್ನೂ, ಇದರಿಂದ ಪೊಲೀಸರಿಗೆ ಹೆಚ್ಚು ಶ್ರಮ ಆಗಬಹುದು. ಆದರೆ ಜನರಲ್ಲಿ ಪ್ರಬಲವಾಗಿ ಅರಿವು ಮೂಡಿಸಲು ಸಹಕಾರಿಯಾಗಲಿದೆ ಎಂದರು.

ಡ್ರಗ್ ನಿಯಂತ್ರಣ ಮಾಡಲು ರಾಜ್ಯದೆಲ್ಲೆಡೆ ದೊಡ್ಡ ಮಟ್ಟದ ಅಭಿಯಾನ ಮಾಡಲಾಗುತ್ತಿದೆ. ಅದರಲ್ಲೂ ಕಾಲೇಜು ಆವರಣಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಅಭಿಯಾನ ಯಶಸ್ವಿಯಾಗಿದೆ.

ಅಭಿಯಾನದಲ್ಲೇ ಸಿಗರೇಟು ಸೇವನೆ ಸೇರಿಸಿ, ಕನಿಷ್ಠ ಪಕ್ಷ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇವನೆಯಿಂದ ದೂರ ಉಳಿಯುವಂತೆ ಮಾಡಬೇಕಿದೆ. ಕಾಲೇಜು ಸಮೀಪ ಸಿಗರೇಟು ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಿಸಿ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments