Webdunia - Bharat's app for daily news and videos

Install App

ಕ್ಷಮೆಯಾಚನೆಗೆ ಸ್ಮೃತಿ ಇರಾನಿ ಆಗ್ರಹ

Webdunia
ಸೋಮವಾರ, 25 ಜುಲೈ 2022 (20:23 IST)
ತಮ್ಮ ಮಗಳ ವಿರುದ್ಧದ ಆಧಾರ ರಹಿತ ಮತ್ತು ಸುಳ್ಳು ಆರೋಪಗಳಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರಾದ ಜೈರಾಂ ರಮೇಶ್ ಮತ್ತು ಪವನ್ ಖೇರಾ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಸ್ಮೃತಿ ಇರಾನಿ ಅವರ ಮಗಳು ಝೋಯಿಶ್ ಇರಾನಿ ಅವರು ಮೃತರೊಬ್ಬರ ಹೆಸರಿನಲ್ಲಿ ಗೋವಾದಲ್ಲಿ ಬಾರ್ ನಡೆಸುತ್ತಿದ್ದಾರೆ. ಹೀಗಾಗಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ನಾಯಕರು ಆಗ್ರಹಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಂಡಿದ್ದಾರೆ. ಆರೋಪಗಳನ್ನು ಬೇಷರತ್ ವಾಪಸ್ ಪಡೆದು, ಕ್ಷಮೆಯಾಚಿಸದಿದ್ದಲ್ಲಿ ಅವರ ವಿರುದ್ಧ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ನೋಟಿಸಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್ ನಾಯಕಿ ನೆಟ್ಟ ಡಿಸೋಜಾ ಮತ್ತು ಕಾಂಗ್ರೆಸ್ ಪಕ್ಷಕ್ಕೂ ನೋಟಿಸ್ ಕಳುಹಿಸಲಾಗಿದೆ. ಝೋಯಿಶ್ ಇರಾನಿಗೆ ಒಡೆತನದಲ್ಲಿದೆ ಎನ್ನಲಾದ ರೆಸ್ಟೋರೆಂಟ್ ಹೊರಗೆ ನಿನ್ನೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments