Webdunia - Bharat's app for daily news and videos

Install App

ಕಳ್ಳಸಾಗಾಟ; 2,000 ಕೋ.ರೂ. ಮೌಲ್ಯದ ಮಾದಕ ದ್ರವ್ಯಗಳು ವಶ

Webdunia
ಸೋಮವಾರ, 14 ಫೆಬ್ರವರಿ 2022 (20:49 IST)
ಮಾದಕ ದ್ರವ್ಯ ನಿಯಂತ್ರಣ ಘಟಕ (ಎನ್‌ಸಿಬಿ) ಮತ್ತು ಭಾರತೀಯ ನೌಕಾಪಡೆ ಜಂಟಿ ಕಾರ್ಯಾಚರಣೆಯಲ್ಲಿ ಗುಜರಾತಿನ ಆಳಸಮುದ್ರದಲ್ಲಿ ನೆರೆಯ ದೇಶದಿಂದ ಕಳ್ಳಸಾಗಣೆಯಾಗುತ್ತಿದ್ದ 2,000 ಕೋ.ರೂ.ವೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿವೆ.
ಇದು ಆಳಸಮುದ್ರದಲ್ಲಿ ಎನ್‌ಸಿಬಿ ಮತ್ತು ಭಾರತೀಯ ನೌಕಾಪಡೆ ನಡೆಸಿದ ಇಂತಹ ಮೊದಲ ಕಾರ್ಯಾಚರಣೆಯಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ವಶಪಡಿಸಿಕೊಂಡಿರುವ ಮಾದಕ ದ್ರವ್ಯಗಳಲ್ಲಿ 529 ಕೆ.ಜಿ.ಗಾಂಜಾ,‌ 234 ಕೆ.ಜಿ.ಕ್ರಿಸ್ಟಲ್ ಮೆಥಾಮ್ಫೆಟಮೈನ್ ಮತ್ತು ಹೆರಾಯ್ನ್ ಸೇರಿದ್ದು,‌ ಜಾಗತಿಕ ಮಾರುಕಟ್ಟೆಯಲ್ಲಿ ಇವುಗಳ ಮೌಲ್ಯ 2,000 ಕೋ.ರೂ.ಗಳಾಗಿವೆ ಎಂದು ಹೇಳಿಕೆಯಲ್ಲಿ ತಿಳಿಸಿರುವ ಎನ್‌ಸಿಬಿ, ಅತ್ಯುತ್ಕೃಷ್ಟ ಗುಣಮಟ್ಟದ ಈ ಮಾದಕ ದ್ರವ್ಯಗಳು ನೆರೆದೇಶದಲ್ಲಿಯ ಡ್ರಗ್ಸ್ ಮಾಫಿಯಾದಿಂದ ಕಳ್ಳಸಾಗಣೆಯಾಗುತ್ತಿದ್ದವು. ಈ ಮಾದಕ ದ್ರವ್ಯಗಳ ವಶವು ಈ ಮಾಫಿಯಾಕ್ಕೆ ಹಾಗೂ ಭಾರತ ಮತ್ತು ಇತರ ದೇಶಗಳಿಗೆ ಮಾದಕ ದ್ರವ್ಯಗಳ ಪೂರೈಕೆಗೆ ಸಮುದ್ರ ಮಾರ್ಗದ ಬಳಕೆಗೆ ಭಾರೀ ಹೊಡೆತವನ್ನು ನೀಡಿದೆ ಎಂದು ಹೇಳಿದೆ. ಸಮುದ್ರದ ಮೂಲಕ ಮಾದಕ ದ್ರವ್ಯಗಳ ಕಳ್ಳಸಾಗಣೆ ಕುರಿತು ತಾನು ಸಂಗ್ರಹಿಸಿದ್ದ ಮಾಹಿತಿಯನ್ನು ಎನ್‌ಸಿಬಿ ಭಾರತೀಯ ನೌಕಾಪಡೆಯ ಗುಪ್ತಚರ ಘಟಕದೊಂದಿಗೆ ಹಂಚಿಕೊಂಡಿತ್ತು ಎಂದೂ ಹೇಳಿಕೆಯು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ