ಮೀನಿನ ಬಲೆಯಲ್ಲಿ ಸಿಲುಕಿಕೊಂಡ ವಿಷಸರ್ಪ: ಮುಂದೇನಾಯ್ತು ಗೊತ್ತಾ?

Webdunia
ಸೋಮವಾರ, 8 ಅಕ್ಟೋಬರ್ 2018 (18:11 IST)
ಮೀನಿನ ಬಲೆಯಲ್ಲಿ ನಾಗರ ಹಾವು ಸಿಲುಕಿಕೊಂಡಿತ್ತು. ಇದನ್ನು ನೋಡಿದ ಸ್ಥಳೀಯರು ಭಯಗೊಂಡಿದ್ದರು.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ   ಮುಂಡಳ್ಳಿಯ ತಿರಗನಮನೆ ಶನಿಯಾರ ನಾಯ್ಕ ಎಂಬುವವರ ಮನೆಯಲ್ಲಿನ ಮೀನಿನ ಬಲೆಯಲ್ಲಿ ಸಿಕ್ಕಿಬಿದ್ದ ನಾಗರಹಾವನ್ನು ಸ್ಥಳೀಯರು ಬಲೆಯಿಂದ ಬಿಡಿಸಿ ಹಾವಿಗೆ ಜೀವದಾನ ನೀಡಿದ್ದಾರೆ. 

ಮೀನು‌ ಬಲೆಯಲ್ಲಿ ಸಿಕ್ಕಿಬಿದ್ದಿದ್ದು ತಪ್ಪಿಸಿಕೊಳ್ಳಲಾಗದೇ ಪರಿತಪಿಸುತ್ತಿದ್ದ ನಾಗರ ಹಾವಿಗೆ ಯಾವುದೇ ರೀತಿಯಲ್ಲಿ ಹಾನಿ ಪಡಿಸದೇ ನಯವಾಗಿ ಬಲೆಯಿಂದ ಬೇರ್ಪಡಿಸಲಾಯಿತು.

 ಹೂ ತೋಟದಲ್ಲಿ ದನಕರುಗಳು ಒಳ ಬರದಂತೆ ತಡೆಯಲು ಹಾಕಲಾಗಿದ್ದ  ಮೀನು ಬಲೆಗೆ ನಾಗರಹಾವು ರಾತ್ರಿ  ಸಿಲುಕಿಕೊಂಡಿತ್ತು. ಬಲೆಯಿಂದ ತಪ್ಪಿಸಿಕೊಳ್ಳಲು ರಾತ್ರಿ ಈಡೀ ಪ್ರಯತ್ನ ಪಟ್ಟು ಸುಸ್ತಾದ ನಾಗರ ಹಾವು ಮೈ ತುಂಬ ಗಾಯ ಮಾಡಿಕೊಂಡಿತ್ತು.

ತೋಟದ ಬಲೆ ಬೇಲಿಗೆ ಸಿಲುಕಿಕೊಂಡ ಹಾವನ್ನು ಕಂಡ ಶನಿಯಾರ ನಾಯ್ಕ ಕುಟುಂಬದವರು  ಹೌಹಾರಿದ್ದಾರೆ. ಬಲೆಯಲ್ಲಿ ಸಿಲುಕಿದ ಹಾವನ್ನು ಬಿಡಿಸುವ ಪ್ರಯತ್ನ ಮಾಡಿದರೂ ಫಲಕಾರಿಯಾಗಿಲ್ಲ. 

ಸ್ಥಳೀಯ ಉರಗ ತಜ್ಞ ಮಾದೇವ ನಾಯ್ಕ ಚಿತ್ರಾಪುರ ಅವರಿಗೆ ಮಾಹಿತಿ ನೀಡಿ ಹಾವಿನ ರಕ್ಷಣೆಗೆ ಆಗ್ರಹಿಸಿರುವ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಉರಗ ಪ್ರೇಮಿ ಮಾದೇವ ನಾಯ್ಕ ಬಲೆಯಲ್ಲಿ ಸಿಲುಕಿ ಗಾಯಗಳನ್ನು ಮಾಡಿಸಿಕೊಂಡ ನಾಗರ ಹಾವಿನ ಗಾಯಕ್ಕೆ ಅರಸಿಣ ಹಚ್ಚಿದರು.   ಬಲೆಯನ್ನು ಕತ್ತರಿಸಿ ಹಾವನ್ನು ಸುರಕ್ಷಿತವಾಗಿ ಹೊರತೆಗೆದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments