Webdunia - Bharat's app for daily news and videos

Install App

ಸಿಎಂ ಮತಹಾಕುವ ಮತಗಟ್ಟೆಯಲ್ಲಿ ಹಾವು ಪ್ರತ್ಯಕ್ಷ

Webdunia
ಶನಿವಾರ, 20 ಫೆಬ್ರವರಿ 2016 (13:14 IST)
ಸಿಎಂ ಸಿದ್ದರಾಮಯ್ಯ ಮತಹಾಕಲು ಬರಲಿದ್ದ ಮತಗಟ್ಟೆಯಲ್ಲಿ ಹಾವೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಮೈಸೂರಿನ ವರುಣಾ ಕ್ಷೇತ್ರ ವ್ಯಾಪ್ತಿಯಡಿ ಬರುವ ಸಿದ್ದರಾಮಹುಂಡಿ ಮತಗಟ್ಟೆಯಲ್ಲಿ ನಡೆದಿದೆ. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಾಮಹುಂಡಿಯಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ 1.30ಕ್ಕೆ ಮತ ಚಲಾಯಿಸಲು ಬರುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆಯನ್ನು ಕೈಗೊಳ್ಳಲಾಯಿತು. ಆ ಸಂದರ್ಭದಲ್ಲಿ ಶಾಲೆಯ ಅಡುಗೆ ಕೋಣೆಯ ಹಿಂಭಾಗದಲ್ಲಿ ಹಾವೊಂದು ಕಾಣಿಸಿಕೊಂಡಿದೆ. ಹೀಗಾಗಿ ಸ್ಥಳದಲ್ಲಿ ಸ್ವಲ್ಪ ಸಮಯ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೊಂದು ರೈತ ಸ್ನೇಹಿ ಹಾವಾಗಿದ್ದು, ಅದರಿಂದ ಯಾವುದೇ ಅಪಾಯವಿರಲಿಲ್ಲ. ಆದರೆ ಸ್ಥಳೀಯರು ಅನಗತ್ಯವಾಗಿ ಅದನ್ನು ಕೊಂದು ಹಾಕಿದ್ದಾರೆ. 
 
ಮತ ಹಾಕಲು ಬೆಂಗಳೂರಿನಿಂದ ಹೊರಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಿದ್ದರಾಮಹುಂಡಿ ಮತಗಟ್ಟೆಯಲ್ಲಿ ಮತ ಹಾಕಲು ಬರುತ್ತಾರೆಂದು ಸೂಚನೆ ಲಭಿಸಿದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments