Webdunia - Bharat's app for daily news and videos

Install App

ದೇವರ ಹಾವಿನ ಸಾವಿನ ವಿವಾದ

Webdunia
ಶುಕ್ರವಾರ, 29 ಜುಲೈ 2016 (08:25 IST)
ಮರಕತ್ತರಿಸುವ ಸಂದರ್ಭದಲ್ಲಿ ನಾಗರಹಾವು ಗರಗಸಕ್ಕೆ ಸಿಕ್ಕಿ ಎರಡು ತುಂಡಾಗಿ ಸಾವನ್ನಪ್ಪಿದ ಘಟನೆ ಯಶವಂತಪುರದ ಸಮೀಪದ ಮುತ್ಯಾಲಮ್ಮ ದೇವಾಲಯದಲ್ಲಿ ಬಳಿ ನಡೆದಿದೆ. ಈ ದುರ್ಘಟನೆ ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

ಘಟನೆಗೆ ಸಂಬಂಧಿಸಿದಂತ ಸ್ಥಳೀಯ ಅರಣ್ಯಾಧಿಕಾರಿಗಳಾದ ಶಿವರಾಮ ಎಂಬುವವರು ಜಾಲಹಳ್ಳಿ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಿದ್ದು ದೇವಾಲಯದ ಧರ್ಮದರ್ಶಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಮುತ್ಯಾಲಮ್ಮ ದೇವಾಲಯದ ಮುಂದಿದ್ದ ಪುರಾತನ ಆಲದ ಮರವನ್ನು ಕತ್ತರಿಸುವಾಗ ಮರದಲ್ಲಿದ್ದ  ಹಾವು ಸಾವನ್ನಪ್ಪಿದೆ. ಇದು ದೇವರ ಹಾವು ಎಂಬು ಭಕ್ತರು ನಂಬಿದ್ದು ಘಟನೆ ಆತಂಕಕ್ಕೆ ಕಾರಣವಾಗಿದೆ.

ದೇವಾಲಯದ ಧರ್ಮದರ್ಶಿ ವಾಸುದೇವ ಅವರು ಜೆ.ಪಿ.ಪಾರ್ಕ್ ವಾರ್ಡ್‌ ಬಿಬಿಎಂಪಿ ಸದಸ್ಯೆ (ಕಾಂಗ್ರೆಸ್) ಮಮತಾ ಅವರ ಪತಿಯಾಗಿದ್ದು ಅವರು ಸ್ಥಳೀಯ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಳ್ಳಲು ಮರ ಕಡಿಸಿದ್ದಾರೆ. ಇದು ದೇವರ ಹಾವಾಗಿದ್ದು ಆಗಾಗಾ ಕಾಣಿಸಿಕೊಳ್ಳುತ್ತಿತ್ತು. ಮರದ ಪೊಟರೆಯಲ್ಲಿ ಆಶ್ರಯ ಪಡೆದಿದ್ದ ಹಾವನ್ನು ತುಂಡರಿಸಿ ಸಾಯಿಸಲಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಸದ್ಯ ವಾಸುದೇವ್ ನಿರೀಕ್ಷಣಾ ಜಾಮೀನನ್ನು ಪಡೆದುಕೊಂಡಿದ್ದಾರೆ.

ತಮ್ಮ ಪತಿಯ ಮೇಲಿನ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮಮತಾ ವಾಸುದೇವ್, ಅರಳಿ ಮರದ ಕೊಂಬೆ ಬೀಳುವ ಸಾಧ್ಯತೆ ಇದ್ದು, ತಕ್ಷಣ ಕಡಿಸುವಂತೆ ಸ್ಥಳೀಯರು ಹೇಳಿದ್ದರು. ಹೀಗಾಗಿ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದೆ. ಪಾಲಿಕೆ ಸಿಬ್ಬಂದಿ ಬಂದು ಕೊಂಬೆ ಕತ್ತರಿಸುವಾಗ ಪೊಟರೆಯಲ್ಲಿದ್ದ ಹಾವು ಆಕಸ್ಮಿಕವಾಗಿ ಸತ್ತಿದೆ. ನನ್ನ ವಿರುದ್ಧ ರಾಜಕೀಯ ಕುತಂತ್ರ ನಡೆಯುತ್ತಿದ್ದು, ಅನಗತ್ಯವಾಗಿ ವಿವಾದವನ್ನು ಸೃಷ್ಟಿಸಲಾಗುತ್ತಿದೆ ಎಂದಿದ್ದಾರೆ

ಗರಗಸಕ್ಕೆ ಸಿಲುಕಿ ಹಾವು 2 ತುಂಡಾಗಿ ಬೀಳುತ್ತಿರುವ ದೃಶ್ಯ ವಾಟ್ಸಪ್  ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡತೊಡಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

Tiranga Yatra, ಭಾರತೀಯ ಯೋಧರಿಗೆ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ: ಬಿವೈ ವಿಜಯೇಂದ್ರ

ಅಶ್ಲೀಲ ವಿಡಿಯೋಗಳನ್ನು ಹರಿಬಿಡುವುದಾಗಿ ಆನಂದ್‌ ಗುರೂಜಿಗೆ ಬೆದರಿಕೆ: ದಿವ್ಯ ವಸಂತಾ ಸೇರಿ ಇಬ್ಬರ ವಿರುದ್ಧ ದೂರು

ಮುಂದಿನ ಸುದ್ದಿ
Show comments