ಸಮಾಜ ಸೇವೆ ಮಾಡಿದವರಿಗೆ ಗೌರವ ತುಂಬಾ ಕಡಿಮೆ: ಸಂತೋಷ್ ಹೆಗ್ಡೆ

Webdunia
ಸೋಮವಾರ, 2 ಮೇ 2022 (14:55 IST)
ಅಧಿಕಾರದಲ್ಲಿರುವವರಿಗೆ ಮತ್ತು ಅತೀ ಶ್ರೀಮಂತರಿಗೆ ಗೌರವ ಹೆಚ್ಚು. ಆದ್ರೆ ದಿ. ಡಾ. ಆರ್ ಎನ್. ಶೆಟ್ಟಿಯವರ ಸಮಾಜ ಸೇವೆಯನ್ನು ಗುರುತಿಸಿ ಅವರ ಪ್ರತಿಮೆ ಅನಾವರಣೆಗೊಳಿಸಿರುವುದು ಶ್ಲಾಘನೀಯ ಎಂದು ನಿವೃತ್ತ ಲೋಕಾಯುಕ್ತ ಎಸ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಬೆಂಗಳೂರಿನ ಬಂಟರ ಸಂಘದ ಆವರಣದಲ್ಲಿ ದಿ. ಡಾ. ಆರ್.ಎನ್.  ಶೆಟ್ಟಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ಮಾತನಾಡಿದ ಅವರು, ಆರ್.ಎನ್. ಶೆಟ್ಟಿ ಅವರು ಸಮಾಜಕ್ಕೆ ನೀಡಿರುವ ಕೊಡುಗೆ ಅನನ್ಯ.     ಹೆಚ್ಚು ಓದಿಲ್ಲದಿದ್ರೂ ತಮ್ಮ ಅನುಭವಗಳಿಂದ ಯಶಸ್ಸನ್ನು ಸಾಧಿಸಿದ್ದರು. ಜೊತೆಗೆ ದಾನ - ಧರ್ಮಗಳ ಮೂಲಕ ಸಮಾಜಕ್ಕೆ ಮಾದರಿ ವ್ಯಕ್ತಿಯಾಗಿದ್ದರು.  ಅವರ ಸಾಧನೆ, ಸಮಾಜ ಸೇವೆಯನ್ನು ಗುರುತಿಸಿ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಇಂತಹ ಸಮಾಜ ಸೇವಕರನ್ನು ಗುರುತಿಸುವ ಕಾರ್ಯ ಮುಂದುವರಿಸಿಕೊಂಡು ಹೊಗಬೇಕು ಎಂದು ಅವರು ಹೇಳಿದರು. 
ಇದೇ ವೇಳೆ, ದಿ. ಡಾ. ಆರ್.ಎನ್. ಎಸ್. ಶೆಟ್ಟಿ ಸ್ಮಾರಕ ಔದ್ಯಮಿಕ ಸಾಧಕ ಪ್ರಶಸ್ತಿಯನ್ನು ಮುಂಬೈನ ಹೇರಂಬ ಇಂಡಸ್ಟ್ರೀಸ್ ನ ಚೇರ್ ಮೆನ್ ಸದಾಶಿವ ಕೆ.ಶೆಟ್ಟಿ ಮತ್ತು ದಿ. ಸುಶೀಲಾ ಪಿ.ಶೆಟ್ಟಿ ಸ್ಮಾರಕ ಮಹಿಳಾ ಸಾಧಕಿ ಪ್ರಶಸ್ತಿಯನ್ನು ಕರ್ನಾಟಕ ಮಹಿಳಾ ದಕ್ಷತ ಸಮಿತಿಯ ಅಧ್ಯಕ್ಷರಾದ ಶರಣ್ಯ ಎಸ್. ಹೆಗ್ಗೆ ಅವರಿಗೆ ನೀಡಿ ಗೌರವಿಸಲಾಯಿತ್ತು.
ಇನ್ನು ಗಿರೀಶ್ ರೈ ಬರೆದಿರುವ ಪ್ರಜಾಪ್ರಭುತ್ವ -ಬಂಟ ಜನಪ್ರತಿನಿಧಿಗಳು ಎಂಬ ಪುಸ್ತಕವನ್ನು ನಿವೃತ್ತ ಲೋಕಾಯುಕ್ತರಾದ ಎಸ್.  ಸಂತೋಷ್ ಹೆಗ್ಡೆ ಅವರು ಬಿಡುಗಡೆಗೊಳಿಸಿದ್ರು. ಅಲ್ಲದೆ, ಕಾರ್ಯಕ್ರಮದಲ್ಲಿ ಕರಾವಳಿಯ ಬಿಸು ಪರ್ಬ (ಯುಗಾದಿ) ಆಚರಣೆಯನ್ನು ಮಾಡಲಾಯಿತ್ತು.
ಕಾರ್ಯಕ್ರಮದಲ್ಲಿ ಗೌರವ ಆತಿಥಿಯಾಗಿ ಜಸ್ಟೀಸ್ ಎಸ್. ವಿಶ್ವಜಿತ್ ಶೆಟ್ಟಿ,  ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ಗೌರವ ಕಾರ್ಯದರ್ಶಿ ಮಧುಕರ ಎಮ್. ಶೆಟ್ಟಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments