Webdunia - Bharat's app for daily news and videos

Install App

ದೀಪಾವಳಿ ಹಬ್ಬಕ್ಕೆ ಹೊಡೆದ ಪಟಾಕಿಗೆ ಸೋಫಾ ತಯಾರಿಕ ಘಟಕ ಭಸ್ಮ

Webdunia
ಗುರುವಾರ, 8 ನವೆಂಬರ್ 2018 (15:19 IST)
ದೀಪಾವಳಿ ಹಬ್ಬದ ಹಿನ್ನೆಲೆ ಹೊಡೆದ ಪಟಾಕಿಯು ಮೂರನೇ ಮಹಡಿಯ ಸೋಫಾ ಸೆಟ್ ತಯಾರಿಕಾ ಗೋದಾಮಿಗೆ  ಬಿದ್ದ ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ನಡೆದಿದೆ.

ಪಟಾಕಿಯ ಬೆಂಕಿಯ ಕಿಡಿಯಿಂದ ಸಾಕಷ್ಟು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬನಹಳ್ಳಿಯಲ್ಲಿ ನಡೆದಿದೆ. ಇನ್ನು ಈ ಸೋಪಾ ಸೆಟ್ ತಯಾರಿಕಾ ಗೋದಾಮು ಕೇರಳ ಮೂಲದ ಶಾಜಿ ಎನ್ನುವವರಿಗೆ ಸೇರಿದ್ದಾಗಿದ್ದು, ಪಟಾಕಿಯನ್ನು ಹೊಡೆಯುವ ಸಂದರ್ಭದಲ್ಲಿ ಪಟಾಕಿಯ ಕಿಡಿಯು ಮೂರನೇ ಮಹಡಿಯಲ್ಲಿದ್ದ ಸೋಫಾ ಸೆಟ್ ತಯಾರಿಕ ಸಾಮಗ್ರಿಗಳಿಗೆ ತಗುಲಿದೆ.

ಹೀಗಾಗಿ ಬೆಲೆ ಬಾಳುವ ವಸ್ತುಗಳು ಅಗ್ನಿಗೆ ಆಹುತಿಯಾಗಿದ್ದು, ಮೂರು ಅಂತಸ್ತಿನ ಕಟ್ಟಡಕ್ಕೆ ಸಂಪೂರ್ಣ ಬೆಂಕಿ ಅವರಿಸಿದೆ. ಮೂರನೇ ಮಹಡಿಯಲ್ಲಿದ್ದ ನಾಲ್ವರನ್ನು ಸ್ಥಳೀಯರ ಸಹಾಯದಿಂದ  ಹಗ್ಗದ ಮೂಲಕ ರಕ್ಷಣೆ ಮಾಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎರಡು ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಮೂರು ಗಂಟೆಗಳಿಂದ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದರು. ಬೆಂಕಿಯು ಹತೋಟಿಗೆ ಬರದೆ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟರು.  ಈ ಕುರಿತು ಸೂರ್ಯ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments