Webdunia - Bharat's app for daily news and videos

Install App

ದೀಪಾವಳಿ ಹಬ್ಬಕ್ಕೆ ಹೊಡೆದ ಪಟಾಕಿಗೆ ಸೋಫಾ ತಯಾರಿಕ ಘಟಕ ಭಸ್ಮ

Webdunia
ಗುರುವಾರ, 8 ನವೆಂಬರ್ 2018 (15:19 IST)
ದೀಪಾವಳಿ ಹಬ್ಬದ ಹಿನ್ನೆಲೆ ಹೊಡೆದ ಪಟಾಕಿಯು ಮೂರನೇ ಮಹಡಿಯ ಸೋಫಾ ಸೆಟ್ ತಯಾರಿಕಾ ಗೋದಾಮಿಗೆ  ಬಿದ್ದ ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ನಡೆದಿದೆ.

ಪಟಾಕಿಯ ಬೆಂಕಿಯ ಕಿಡಿಯಿಂದ ಸಾಕಷ್ಟು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬನಹಳ್ಳಿಯಲ್ಲಿ ನಡೆದಿದೆ. ಇನ್ನು ಈ ಸೋಪಾ ಸೆಟ್ ತಯಾರಿಕಾ ಗೋದಾಮು ಕೇರಳ ಮೂಲದ ಶಾಜಿ ಎನ್ನುವವರಿಗೆ ಸೇರಿದ್ದಾಗಿದ್ದು, ಪಟಾಕಿಯನ್ನು ಹೊಡೆಯುವ ಸಂದರ್ಭದಲ್ಲಿ ಪಟಾಕಿಯ ಕಿಡಿಯು ಮೂರನೇ ಮಹಡಿಯಲ್ಲಿದ್ದ ಸೋಫಾ ಸೆಟ್ ತಯಾರಿಕ ಸಾಮಗ್ರಿಗಳಿಗೆ ತಗುಲಿದೆ.

ಹೀಗಾಗಿ ಬೆಲೆ ಬಾಳುವ ವಸ್ತುಗಳು ಅಗ್ನಿಗೆ ಆಹುತಿಯಾಗಿದ್ದು, ಮೂರು ಅಂತಸ್ತಿನ ಕಟ್ಟಡಕ್ಕೆ ಸಂಪೂರ್ಣ ಬೆಂಕಿ ಅವರಿಸಿದೆ. ಮೂರನೇ ಮಹಡಿಯಲ್ಲಿದ್ದ ನಾಲ್ವರನ್ನು ಸ್ಥಳೀಯರ ಸಹಾಯದಿಂದ  ಹಗ್ಗದ ಮೂಲಕ ರಕ್ಷಣೆ ಮಾಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎರಡು ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಮೂರು ಗಂಟೆಗಳಿಂದ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದರು. ಬೆಂಕಿಯು ಹತೋಟಿಗೆ ಬರದೆ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟರು.  ಈ ಕುರಿತು ಸೂರ್ಯ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments