Webdunia - Bharat's app for daily news and videos

Install App

ತುಮಕೂರಿನಲ್ಲಿ ತಮ್ಮ ಸಂಚಾರ ಮುಂದುವರೆಸಿದ ಸೋಮಣ್ಣ

geetha
ಭಾನುವಾರ, 11 ಫೆಬ್ರವರಿ 2024 (20:43 IST)
ತುಮಕೂರು :ಶನಿವಾರ ಕುಂಚಿಟಿಗ ಸಮುದಾಯ ಭವನದಲ್ಲಿ ನಡೆದ ಸಮಾಜದ ಮುಖಂಡರ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿ. ಸೋಮಣ್ಣ ಬಳಿಕ ವಿದ್ಯಾವಾಹಿನಿ ಕಾಲೇಜು ಸಂಸ್ಥಾಪಕ ಜಯಣ್ಣ ಅವರ ಮನೆಗೂ ಭೇಟಿ ನೀಡಿದ್ದಾರೆ. ವಿ. ಸೋಮಣ್ಣ ಅವರೊಂದಿಗೆ ಶಾಸಕ ಜ್ಯೋತಿ ಗಣೇಶ್‌, ಸುರೇಶ್‌ ಗೌಡ ಅವರೂ ಸಹ ಪಾಲ್ಗೊಂಡಿದ್ದರು. ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಮಾಜಿ ಸಚಿವ ವಿ. ಸೋಮಣ್ಣ ತುಮಕೂರಿನಲ್ಲಿ ತಮ್ಮ ಸಂಚಾರವನ್ನು ಮುಂದುವರೆಸಿದ್ದಾರೆ. ವಿವಿಧ ಕ್ಷೇತ್ರಗಳ ಗಣ್ಯರು , ರಾಜಕೀಯ ಮುಖಂಡರನ್ನು ಭೇಟಿಯಾಗುತ್ತಿರುವ ವಿ. ಸೋಮಣ್ಣ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಸತತವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. 

ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಗುರುಭವನ ಸ್ಥಾಪಿಸಿದ ಸೋಮಣ್ಣ ಎಲ್ಲ ಪಕ್ಷದ ರಾಜಕೀಯ ಮುಖಂಡರನ್ನೂ ಕರೆದು ಅದ್ದೂರಿಯಾಗಿ ಕಾರ್ಯಕ್ರಮ ನಡೆಸಿದ್ದರು. ಲೋಕಸಭಾ ಚುನಾವಣೆಯಲ್ಲಿ ತುಮಕೂರಿ ಕ್ಷೇತ್ರದಿಂದ ವಿ.ಸೋಮಣ್ಣ ಸ್ಪರ್ಧಿಸುವ ಇಚ್ಛೆ ಹೊಂದಿದ್ದಾರೆನ್ನಲಾಗಿದ್ದು, ಅದಕ್ಕಾಗಿ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments