Publish Date: Tue, 10 Jan 2023 (08:45 IST)
Updated Date: Tue, 10 Jan 2023 (09:47 IST)
ಚಿಕ್ಕಬಳ್ಳಾಪುರ : ಮುಂದಿನ 10-12 ವರ್ಷದಲ್ಲಿ ಅರೋಗ್ಯ ಸಚಿವ ಕೆ ಸುಧಾಕರ್ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿರುವ ರಾಜಕಾರಣಿ ಆಗಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಉತ್ಸವದಲ್ಲಿ ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್ ಭವಿಷ್ಯ ನುಡಿದಿದ್ದಾರೆ.
ಸುಧಾಕರ್ ಓರ್ವ ದೂರದೃಷ್ಟಿಯ ರಾಜಕಾರಣಿಯಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ರಾಜಕೀಯ ಭವಿಷ್ಯ ಅವರಿಗಿದೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಉತ್ಸವದ 3ನೇ ದಿನದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಘಟಾನುಘಟಿಗಳನ್ನು ಎದುರು ಹಾಕಿಕೊಂಡು ಅವರು ಕ್ಷೇತ್ರಕ್ಕೆ ವೈದ್ಯಕೀಯ ಕಾಲೇಜು ತಂದರು. ಅನೇಕರನ್ನು ವಿರೋಧ ಮಾಡಿಕೊಂಡು ಮನೆಗಳನ್ನು ಕೊಟ್ಟಿದ್ದಾರೆ.
ಅದೇ ರೀತಿಯಲ್ಲಿ ಘಟಾನುಘಟಿಗಳನ್ನು ಎದುರು ಹಾಕಿಕೊಂಡು ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್ ಪ್ರತ್ಯೇಕಿಸಲು ಶ್ರಮಿಸುತ್ತಿದ್ದಾರೆ ಎಂದರು.
ಚಿಕ್ಕಬಳ್ಳಾಪುರವನ್ನು ಮಾದರಿ ಜಿಲ್ಲೆಯಾಗಿ ಮಾಡಲು ಸುಧಾಕರ್ ಶ್ರಮಿಸುತ್ತಿದ್ದಾರೆ. ಇವರು ಬದ್ಧತೆ ಇರುವ ಸಚಿವರಾಗಿದ್ದು ನಿಮ್ಮ ಋಣ ತೀರಿಸಲು ಕಷ್ಟಪಡುತ್ತಿದ್ದಾರೆ ಎಂದು ಹೇಳಿದರು.