Select Your Language

Notifications

webdunia
webdunia
webdunia
webdunia

ಬಿ.ಎಸ್.ಯಡಿಯೂರಪ್ಪರನ್ನು ಸಹಿಸದವರು ವಿವಾದ ಸೃಷ್ಟಿಸುತ್ತಿದ್ದಾರೆ: ರೇಣುಕಾಚಾರ್ಯ

ಬಿ.ಎಸ್.ಯಡಿಯೂರಪ್ಪರನ್ನು ಸಹಿಸದವರು ವಿವಾದ ಸೃಷ್ಟಿಸುತ್ತಿದ್ದಾರೆ: ರೇಣುಕಾಚಾರ್ಯ
ಬೆಂಗಳೂರು , ಬುಧವಾರ, 29 ಜೂನ್ 2016 (10:32 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಸಹಿಸದವರು ಸುಮ್ಮನೆ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಗಂಭೀರವಾಗಿ ಆರೋಪಿಸಿದ್ದಾರೆ.
 
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರೇಣುಕಾಚಾರ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಸಹಿಸದವರು ಭಿನ್ನಮತ ಸ್ವರೂಪದಲ್ಲಿ ಮಾತನಾಡುತ್ತಿದ್ದಾರೆ. ವಾತವರಣ ಹಾಳು ಮಾಡಲು ಅವರು ವಿವಾದ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
 
ನಿನ್ನೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಭಿನ್ನಮತಿಯರ ಸಭೆಯಲ್ಲಿ ಹಿರಿಯ ನಾಯಕರು ಭಾಗಿಯಾಗರಲಿಲ್ಲ. ಕೆಲವರು ಸುಮ್ಮನೆ ವಿವಾದವನ್ನು ಹುಟ್ಟು ಹಾಕುತ್ತಿದ್ದಾರೆ. ಪಕ್ಷದ ನಾಯಕರಲ್ಲಿ ಅಸಮಾಧಾನವಿದ್ದರೆ, ಪಕ್ಷದ ವೇದಿಕೆಯಲ್ಲಿ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಎಲ್ಲರನ್ನು ಪದಾಧಿಕಾರಿಗಳಾಗಿ ನೇಮಕ ಮಾಡುಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಲೆಯಲ್ಲಿ ಸಾಮೂಹಿಕ ಅತ್ಯಾಚಾರ