Webdunia - Bharat's app for daily news and videos

Install App

ವಿವೇಕಾನಂದರ ವಿಚಾರಧಾರೆಗಳನ್ನು ತಿರುಚಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 18 ಜನವರಿ 2017 (15:07 IST)
ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ತಿರುಚಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
 
ರಾಷ್ಟ್ರೀಯ ಯುವ ಸಪ್ತಾಹದಲ್ಲಿ ಮಾತನಾಡಿದ ಅವರು, ಧರ್ಮ ಎನ್ನುವುದು ಪೂಜೆ, ಮಂತ್ರದಿಂದ ಸಿಗುವುದಿಲ್ಲ. ಮನುಷ್ಯತ್ವದಿಂದ ಧರ್ಮ ಸಾಕಾರವಾಗುತ್ತದೆ. ಸ್ವಾಮಿ ವಿವೇಕಾನಂದರು ಧರ್ಮಕ್ಕಿಂತ ಮನುಷ್ಯತ್ವ ಒತ್ತು ನೀಡಿದ್ದರು. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿವೇಕಾನಂದರ ದಿನಾಚಾರಣೆ ಆಚರಿಸಿ ಅವರ ವಿಚಾರಧಾರೆಗಳನ್ನು ತಿರುಚಲು ಪ್ರಯತ್ನಿಸುತ್ತಿವೆ ಎಂದು ದೂರಿದರು. 
 
ಮೊದಲು ಹಸಿದವರಿಗೆ ಊಟ ಕೊಡಿ ಆಮೇಲೆ ಧರ್ಮ ಎಂದು ಹೇಳಿದ್ದ ವಿವೇಕಾನಂದರು ಕೇವಲ 39 ವರ್ಷ ಬದುಕಿದ್ದರು. ಅವರು ಎಷ್ಟು ವರ್ಷ ಬದುಕಿದ್ದರು ಎನ್ನುವುದು ಮುಖ್ಯವಲ್ಲ. ಅವರ ವಿಚಾರಧಾರೆಗಳು ಮುಖ್ಯ ಎಂದರು.  
 
ಅಸ್ಪೃಶ್ಯತೆ ಎನ್ನುವುದು ಮಾನಸಿಕ ರೋಗ. ಕೆಲವರು ತಮ್ಮ ಸ್ವಾರ್ಥಕಾಗಿ ಅಸ್ಪೃಶ್ಯತೆಯನ್ನು ಸೃಷ್ಟಿಸಿದ್ದಾರೆ. ಮೊದಲು ನಾವು ಇದರಿಂದ ಹೊರ ಬರಬೇಕಾಗಿದೆ. ವಿವೇಕಾನಂದರ ವಿಚಾರಧಾರೆ ಅರೆತರೆ ಇದೇಲ್ಲ ಸಾಧ್ಯ ಎಂದು ಹೇಳಿದರು.
 
ಜ್ಯಾತ್ಯಾತೀತ ಎಂದರೆ ಧರ್ಮ ಬಿಡಬೇಕು ಎಂದಲ್ಲ. ಧರ್ಮಗಳಲ್ಲಿ ಸಹಿಷ್ಣುತೆ ಇರಬೇಕು ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊಳೆ ಬದಿ ಸ್ನಾನ ಮಾಡುವಾಗ ಬಂತೊಂದು ದೊಡ್ಡ ಸರ್ಪ: ಶಾಕಿಂಗ್ ವಿಡಿಯೋ

ರೈಲು ಹಳಿ ಮೇಲೆ ಮಲಗಿ ಯುವಕನ ರೀಲ್ಸ್ ಹುಚ್ಚಾಟ: ವಿಡಿಯೋ ನೋಡಿ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಬೇಡ ಎನ್ನಿ ಎಂದ ಬಸವರಾಜ ರಾಯರೆಡ್ಡಿ: ಈ ಕಂಡೀಷನ್ ಮೊದ್ಲೇ ಹೇಳ್ಬೇಕಿತ್ತು ಎಂದ ಜನ

ಅಂತೂ ಮುಖ್ಯಮಂತ್ರಿ ಪಟ್ಟ ಬಿಡುವ ಕಾಲ ಬಂತು: ನೆಟ್ಟಿಗರಿಂದ ಸಿದ್ದರಾಮಯ್ಯ ಟ್ರೋಲ್

ಮುಂದಿನ ಸುದ್ದಿ
Show comments