Webdunia - Bharat's app for daily news and videos

Install App

ಕೆಲವರು ಟಿಪ್ಪುವಿಗೆ ಹುಟ್ಟಿದಂತೆ ಮಾತನಾಡುತ್ತಾರೆ

Webdunia
ಸೋಮವಾರ, 20 ಫೆಬ್ರವರಿ 2023 (17:35 IST)
ಕೆಲವರು ಟಿಪ್ಪುವಿಗೆ ಹುಟ್ಟಿದಂತೆ ಮಾತನಾಡುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಾಜಿ ಮಹಾರಾಜರ ಸಾಧನೆ ಬಗ್ಗೆ ಮಾತನಾಡಿದರೆ ಕೆಲವರಿಗೆ ನೋವಾಗುತ್ತದೆ. ಆದರೆ, ಟಿಪ್ಪು ಸುಲ್ತಾನ್​​ ಹಿಂದೂ ದೇವಸ್ಥಾನಗಳನ್ನು ನಾಶ ಮಾಡಿದ. ದೌರ್ಜನ್ಯ ನಡೆಸಿ ಲಕ್ಷಾಂತರ ಜನರನ್ನು ಮತಾಂತರ ಮಾಡಿದ. ಆದರೆ ಕೆಲವರು ಆತನಿಗೆ ಹುಟ್ಟಿದಂತೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ಕೆಲವರು ನಾ ಹಿಂದೂ ಅಂತ ಹೇಳಿಕೊಳ್ಳುತ್ತಾರೆ. ಆದರೆ, ಹಿಂದುತ್ವವನ್ನು ಒಪ್ಪುವುದಿಲ್ಲವಂತೆ. ಇಂದು ಅಂತಹ ವ್ಯವಸ್ಥೆಯಲ್ಲಿ ನಾವು ಇದ್ದೇವೆ. ಕೆಲವು ಬುದ್ಧಿಜೀವಿಗಳು ಶಿವಾಜಿ ಸಾಧನೆ ಬಗ್ಗೆ ಸ್ವಲ್ಪವೇ ಬರೆಯುತ್ತಾರೆ. ಆದರೆ ಅಕ್ಬರ್​ ಬಗ್ಗೆ ಎಷ್ಟು ಬೇಕಾದರೂ ಬರೆಯುತ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದಲ್ಲಿ ಎಲ್​ಪಿಜಿ ಸಿಲಿಂಡರ್ ದರ 10 ಸಾವಿರ ರೂಪಾಯಿ ಆಗಿದೆ. ನಮ್ಮಲ್ಲಿ 100 ರೂ. ಹೆಚ್ಚಾದರೆ ಪ್ರಧಾನಿ ಮೋದಿ ಕಾರಣ ಅಂತ ದೂರುತ್ತಾರೆ. ಪೆಟ್ರೋಲ್, ಡೀಸೆಲ್ ದರ ಸ್ವಲ್ಪ ಹೆಚ್ಚಾದ್ರೂ ಧಿಕ್ಕಾರ ಕೂಗುತ್ತಾರೆ. ಧಿಕ್ಕಾರ ಹಾಕುವವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಯತ್ನಾಳ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments