Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಹೇಳಿಕೆ ಹಿಂದೆ ಷಡ್ಯಂತ್ರ: ಉಗ್ರಪ್ಪ ಕಿಡಿ

ಯಡಿಯೂರಪ್ಪ ಹೇಳಿಕೆ ಹಿಂದೆ ಷಡ್ಯಂತ್ರ: ಉಗ್ರಪ್ಪ ಕಿಡಿ
ಬೆಂಗಳೂರು , ಮಂಗಳವಾರ, 20 ಡಿಸೆಂಬರ್ 2016 (16:05 IST)
ಸದ್ಯದಲ್ಲಿಯೇ ರಾಜ್ಯ ಸರಕಾರದ ಎಂಎಲ್‌ಸಿ ಹಾಗೂ ಸಚಿವರ ಬಣ್ಣ ಬಯಲಾಗಲಿದೆ. ನಾನು ಭವಿಷ್ಯ ನುಡಿಯುತ್ತಿಲ್ಲ. ಬದಲಿಗೆ ಇನ್ನೆರೆಡು ದಿನ ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ  ಮಹಿಳಾ ದೌರ್ಜನ್ಯ ತಡೆ ಸಮಿತಿಯ ಅಧ್ಯಕ್ಷ ಉಗ್ರಪ್ಪ, ಬಿಎಸ್‌ವೈ ಹೇಳಿಕೆಯ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಕಿಡಿ ಕಾರಿದರು.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿಬಿಐ ಬ್ರೀಫ್ ಮಾಡುತ್ತಿದೆಯೇ ಎಂದು ಪ್ರಶ್ನಿಸಿದರು.
 
ಬಿಎಸ್‌ವೈ ಹೇಳಿಕೆಯ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಸಿಬಿಐ ಬಳಸಿಕೊಂಡು ರಾಜ್ಯ ಸರಕಾರವನ್ನು ಅತಂತ್ರಗೊಳಿಸಲು ಸಂಚು ರೂಪಿಸುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ಅವಕಾಶ ನೀಡದ ಪ್ರಧಾನಿ ನರೇಂದ್ರ ಮೋದಿ ಕ್ರಮದ ಕುರಿತು ಆಕ್ಷೇಪ ಸಲ್ಲಿಸಿದ ಉಗ್ರಪ್ಪ ಅವರು, ರಾಜ್ಯದ ಕುರಿತು ಪ್ರಧಾನಿ ಮೋದಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನೋಟು ನಿಷೇಧ: ಹಣ ಸಿಗದಿದ್ದಕ್ಕೆ ಬ್ಯಾಂಕ್ ಮೇಲೆ ದಾಳಿ