Webdunia - Bharat's app for daily news and videos

Install App

ಅಮ್ಮನ ದೇವಸ್ಥಾನ ಕಟ್ಟಿಸಿ ಪೂಜೆ ಸಲ್ಲಿಸುತ್ತಿರುವ ಪುತ್ರ

Webdunia
ಭಾನುವಾರ, 10 ಮೇ 2015 (15:30 IST)
ತಾಯಿಗಿಂತ ಬಂಧುವಿಲ್ಲ, ಉಪ್ಪಿಗಿಂತ ರುಚಿಯಿಲ್ಲ ಎನ್ನುತ್ತಾರೆ. ಹೆತ್ತು, ಹೊತ್ತು ಜೀವನ ರೂಪಿಸಿದ ಅಮ್ಮ ದೇವರಿಗಿಂತಲೂ ಮಿಗಿಲೆನಿಸುತ್ತಾಳೆ. ತಾಯಿಯನ್ನು ಪ್ರೀತಿಸುವುದು, ಆರಾಧಿಸುವುದು ಸಾಮಾನ್ಯ. ಆದರೆ ಹಾವೇರಿಯ ಈ ಪುತ್ರರು ತಮ್ಮ ಹೆತ್ತವ್ವನಿಗಾಗಿ ದೇವಸ್ಥಾನವನ್ನೇ ಕಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳೂರು ತಾಂಡಾದ ನಿವಾಸಿ ಅಣ್ಣಪ್ಪ ತಮ್ಮ ತಾಯಿಗಾಗಿ ದೇವಸ್ಥಾನ ಕಟ್ಟಿಸಿದ್ದಾರೆ. 2010ರಲ್ಲಿ ತಮ್ಮ ತಾಯಿ ಹೇಮಲವ್ವ ಲಮಾಣಿಯವರ ಶಿಲಾಮೂರ್ತಿ ಪ್ರತಿಷ್ಠಾಪಿಸಿರುವ ಅವರು ಪ್ರತಿನಿತ್ಯ ಅದಕ್ಕೆ ಪೂಜೆ ಸಲ್ಲಿಸುತ್ತಾರೆ. 
 
ಅಣ್ಣಪ್ಪ ಅವರಿಗೆ ಮೂವರು ಹಿರಿಯ ಸಹೋದರರಿದ್ದು, ಅವರೆಲ್ಲ ಸ್ವಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದಾರೆ. ಕೊನೆಯವರಾದ ಅಣ್ಣಪ್ಪ ಲಮಾಣಿ ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದ ಭವನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 
 
ಹೆತ್ತ ತಾಯಿಯನ್ನು ಅಪಾರವಾಗಿ ಗೌರವಿಸುವ ಸಹೋದರರು ಆಕೆಗಾಗಿ ದೇವಸ್ಥಾನವನ್ನು ಕಟ್ಟಿಸಿ ಪೂಜೆ, ಪ್ರಾರ್ಥನೆ ಸಲ್ಲಿಸುತ್ತಾರೆ.  ಸಹೋದರರ ಈ ದೊಡ್ಡಗುಣವನ್ನು ಕಂಡು ಗ್ರಾಮಸ್ಥರು ಸಹ ಅಭಿಮಾನ ವ್ಯಕ್ತಪಡಿಸುತ್ತಾರೆ.
 
ನವರಾತ್ರಿ ಸಮಯದಲ್ಲಿ ತಾಯಿಗೆ ವಿಶೇಷ ಪೂಜೆಯನ್ನು ಆಯೋಜಿಸಲಾಗುತ್ತದೆ.
 
ಹೆತ್ತವರನ್ನು ಕಸದಂತೆ ಬೀದಗೆಸೆಯುವ ಹೊಣೆಗೇಡಿ ಮಕ್ಕಳ ನಡುವೆ ಅಣ್ಣಪ್ಪ ಮತ್ತು ಅವರ ಸಹೋದರರು ವಿಭಿನ್ನವಾಗಿ ನಿಲ್ಲುತ್ತಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

Show comments