Webdunia - Bharat's app for daily news and videos

Install App

ಮಗನಿಂದ ಡೆತ್ ನೋಟ್ ಬರೆಸಿ ಅಪ್ಪ ಆತ್ಮಹತ್ಯೆ

Webdunia
ಬುಧವಾರ, 24 ಆಗಸ್ಟ್ 2016 (08:34 IST)
ಮಗನಿಂದ ಡೆತ್ ನೋಟ್ ಬರೆಯಿಸಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. 
 
ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ನೇಣಿಗೆ ಶರಣಾದ ವ್ಯಕ್ತಿಯನ್ನು ನಂದಾ (37) ಎಂದು ಗುರುತಿಸಲಾಗಿದೆ. ಪೊಲೀಸ್ ಹಾಗೂ ಗ್ರಾಮ ಪಂಚಾಯತಿಗೆ ದೂರು ನೀಡಲು ಬೇಕು ಎಂದು ಸ್ಥಳೀಯ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಮಗನಿಂದ ಡೆತ್ ನೋಟ್ ಬರೆಸಿಕೊಂಡ ಆತ ಸ್ವಲ್ಪ ಸಮಯದ ಬಳಿಕ ತಮ್ಮ ಮನೆಗೆ ಹೋಗುವ ಕಾಲುದಾರಿಗೆ ಹೊಂದಿಕೊಂಡಂತೆ ಇರುವ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ. 
 
ಡೆತ್ ನೋಟ್‌ನಲ್ಲೇನಿದೆ: ನಾವು ಓಡಾಡುವ ಕಾಲುದಾರಿಯಲ್ಲಿ ಬಾಳೆಗಿಡ ನೆಟ್ಟು ನೆರೆ ಮನೆಯವರು ಕಿರುಕುಳ ನೀಡುತ್ತಿದ್ದಾರೆ. ನನ್ನ ಸಾವಿಗೆ ಇಬ್ರಾಹಿಂ, ನಂದಕುಮಾರ್, ಅಕ್ಕಮ್ಮ, ರಾಜು ಎಂಬುವವರೇ ಕಾರಣ ಎಂದಾತ ಆರೋಪಿಸಿದ್ದಾನೆ.
 
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments