Webdunia - Bharat's app for daily news and videos

Install App

ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ ಅತ್ತೆಗೆ ಅಳಿಯ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 12 ಡಿಸೆಂಬರ್ 2018 (07:02 IST)
ತುಮಕೂರು : ಅಳಿಯನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಅತ್ತೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ಬಂಡೆಪಾಳ್ಯದ ನಿವಾಸಿ ಪ್ರೇಮಾ(45) ಕೊಲೆಯಾದ ಮಹಿಳೆಯಾಗಿದ್ದು, ಕಾರ್ತಿಕ್ ಅತ್ತೆಯನ್ನೇ ಕೊಲೆ ಮಾಡಿದ ಪಾಪಿ ಅಳಿಯ. ಪ್ರೇಮಾ ಎಂಬುವರು ತಮ್ಮ ಮಗಳನ್ನು ಕಾರ್ತಿಕ್ ಎಂಬಾತನೊಂದಿಗೆ ಮದುವೆ ಮಾಡಿದ್ದರು. ಇತ್ತೀಚೆಗೆ ಕಾರ್ತಿಕ್ ಬೇರೊಬ್ಬ ಮಹಳೆಯ ಜೊತೆ ಸಂಬಂಧವಿಟ್ಟುಕೊಂಡಿರುವ ವಿಚಾರ ಅತ್ತೆಗೆ ತಿಳಿದ ಕಾರಣ ಕಾರ್ತಿಕ ಬಳಿ ಈ ವಿಚಾರಕ್ಕೆ ಜಗಳವಾಡಿದ್ದಾರೆ.


ಇದರಿಂದ ಕೋಪಗೊಂಡ ಆತ ರಾತ್ರಿ ಮನೆಯವರೆಲ್ಲರೂ ಊಟ ಮಾಡಿ ಮಲಗಿದ್ದಾಗ ಮಧ್ಯರಾತ್ರಿ ಎದ್ದು ಅತ್ತೆಯನ್ನು ಕತ್ತು ಹಿಸುಕಿ ಸಾಯಿಸಿ ನಂತರ ಯಾರಿಗೂ ಅನುಮಾನ ಬಾರದಂತೆ ಮೃತದೇಹವನ್ನು ಅಡುಗೆ ಮನೆಗೆ ಎಳೆದೊಯ್ದು ಗ್ಯಾಸ್ ಸಿಲಿಂಡರ್ ಸೋರಿಕೆ ಮಾಡಿ ಬೆಂಕಿ ಹಚ್ಚಿ  ಎಲ್ಲರನ್ನೂ ಕರೆದಿದ್ದಾನೆ.


ಮನೆಯವರು ಬೆಂಕಿಯನ್ನು ನಂದಿಸಿದ್ದು, ಪ್ರೇಮಾ ಅವರನ್ನು ಎಬ್ಬಿಸಲು ಯತ್ನಿಸಿದ್ದಾರೆ. ಆದರೆ ಅವರು ಸತ್ತಿರುವ ವಿಚಾರ ತಿಳಿದು ಅಳಿಯನ ಮೇಲೆ ಅನುಮಾನಬಂದು ಆತನನ್ನು ಥಳಿಸಿ ಬಾಯ್ಬಿಡಿಸಿ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಪೊಲೀಸ್ ಬರುವುದರೊಳಗೆ ಕಾರ್ತಿಕ್ ಅಲ್ಲಿಂದ ಪರಾರಿಯಾಗಿದ್ದು , ನಂತರ  ಕಾರ್ತಿಕ್ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆತನನ್ನು ಹುಡುಕಿ ಇದೀಗ ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments