Webdunia - Bharat's app for daily news and videos

Install App

ಕಲ್ಲಪ್ಪ ಹಂಡಿಭಾಗ್ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಲಿ: ಪೋಷಕರು

Webdunia
ಶನಿವಾರ, 27 ಆಗಸ್ಟ್ 2016 (18:16 IST)
ನನ್ನ ಮಗ ನಿರಪರಾಧಿ. ಆತ ಯಾರ ಮನಸ್ಸನ್ನು ನೋಯಿಸದಂತಹ ವ್ಯಕ್ತತ್ವ ಹೊಂದಿದ್ದು, ಅವನಿಗೆ ಮೋಸವಾಗಿದೆ. ಅವನದಲ್ಲದ ತಪ್ಪಿಗೆ ನಾವು ಅವನನ್ನು ಕಳೆದುಕೊಂಡಿದ್ದೇವೆ ಎಂದು ಮೃತ ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರ ಪೋಷಕರು ಮಾಧ್ಯಮದ ಮುಂದೆ ಅಳಲು ತೊಡಿಕೊಂಡಿದ್ದಾರೆ.
 
ಮಗನ ಸಾವಿನ ಸುದ್ದಿಯಿಂದ ಇನ್ನೂ ಹೊರ ಬರದ ಕಲ್ಲಪ್ಪ ಹಂಡಿಭಾಗ ಪೋಷಕರು, ಮಗ ಸತ್ತ ಮೇಲೆ ಊರಿನ ಜನತೆ, ಸರಕಾರ ಹಾಗೂ ಸಂಘ ಸಂಸ್ಥೆಗಳು ಧೈರ್ಯ ತುಂಬಿ ಆರ್ಥಿಕ ನೆರವು ನೀಡಿವೆ. ಆದರೆ, ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ. ಆತ ನಿರಪರಾಧಿ ಎಂದು ಕಲ್ಲಪ್ಪನ ಪೋಷಕರು ಕಣ್ಣೀರಿಟ್ಟರು. 
 
ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗದ ಸರಕಾರಿ ಅಧಿಕಾರಿಗಳ ಸಂಘ, ಕಲ್ಲಪ್ಪ ಹಂಡಿಭಾಗ್ ಕುಟುಂಬಕ್ಕೆ 3 ಲಕ್ಷ ರೂಪಾಯಿ ಧನ ಸಹಾಯ ಮಾಡಿತು. ಈ ವೇಳೆ, ಸಂಘದ ಪದಾಧಿಕಾರಿಗಳ ಮುಂದೆ ಕಲ್ಲಪ್ಪನ ಪೋಷಕರು ಕಷ್ಟದಲ್ಲಿ ತಮ್ಮ ಮಗ ಬೆಳೆದು ಬಂದಿದ್ದ ದಾರಿಯನ್ನು ಹಾಗೂ ಸರಕಾರ ನೀಡಿರುವ ಭರವಸೆಗಳ ಕುರಿತು ತಿಳಿಸಿದರು.
 
ತಮ್ಮ ಮಗ ಕಲ್ಲಪ್ಪ ಹಂಡಿಭಾಗ್ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಲಿ ಎಂದು ಒತ್ತಾಯಿಸಿದ ಕಲ್ಲಪ್ಪ ಪೋಷಕರು, ತಮಗೆ ಆರ್ಥಿಕ ನೆರವು ನೀಡಿರುವ ಎಲ್ಲರಿಗೂ ಕೈ ಮುಗಿದು ಕೃತಜ್ಞತೆ ಸಲ್ಲಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

ಮುಂದಿನ ಸುದ್ದಿ
Show comments