Webdunia - Bharat's app for daily news and videos

Install App

ಅಸ್ತಿಗಾಗಿ ಅಪ್ಪನನ್ನು ಕೊಂದ ಮಗ

Webdunia
ಗುರುವಾರ, 3 ಫೆಬ್ರವರಿ 2022 (19:33 IST)
ಮಗನ ಹೆಸರಿಗೆ ಜಮೀನು ಬರೆದುಕೊಡಲು ನಿರಾಕರಿಸಿದ ಪತಿ ಚನ್ನಿಗರಾಯಪ್ಪನನ್ನು ಕೊಲೆ ಮಾಡಿ ಶವ ಸುಟ್ಟುಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ, ಮಗ ಸೇರಿ ಐದು ಮಂದಿ ಆರೋಪಿಗಳನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪತ್ನಿ ಶೋಭಾ ಅಲಿಯಾಸ್ ಯಶೋಧಾ (33), ಮಗ ನಿಖಿಲ್ ಅಲಿಯಾಸ್ ಅಭಿ (22) ಮತ್ತು ಗುರುಕಿರಣ್ (21), ವಿಶ್ವಾಸ್ (20), ಮಂಜುನಾಥ್ (29) ಬಂಧಿತ ಆರೋಪಿಗಳು.
 
ಕೊರಟಗೆರೆ ತಾಲ್ಲೂಕು ಪಣ್ಣೇನಹಳ್ಳಿ ನಿವಾಸಿಯಾದ ಚನ್ನಿಗರಾಯಪ್ಪನಿಗೆ 21 ಗುಂಟೆ ಕೃಷಿ ಭೂಮಿ ಇದ್ದು, ಈತನಿಗೆ 24 ವರ್ಷಗಳ ಹಿಂದೆ ಯಶೋಧಾ ಜತೆ ಮದುವೆಯಾಗಿದ್ದು, ನಿಖಿಲ್ ಎಂಬ ಗಂಡುಮಗನಿದ್ದಾನೆ. 20 ವರ್ಷಗಳ ಹಿಂದೆ ಎಚ್‍ಎಸ್‍ಆರ್ ಲೇಔಟ್, ಗಾರೆಬಾವಿ ಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ಯಶೋಧಾ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡು ಮಗನೊಂದಿಗೆ ವಾಸವಾಗಿದ್ದರು.
 
ಮಗ ನಿಖಿಲ್ ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದನು. ಪತಿ ಚನ್ನಿಗರಾಯಪ್ಪ ಎರಡನೆ ಮದುವೆಯಾಗಿದ್ದು, ಕೊರಟಗೆರೆ ತಾಲ್ಲೂಕಿನ ಪಣ್ಣೇನಹಳ್ಳಿಯಲ್ಲಿರುವ 21 ಗುಂಟೆ ಜಮೀನು ಮಾರುವ ವಿಚಾರ ಯಶೋಧಾಗೆ ಗೊತ್ತಾಗಿದೆ.
 
ಈ ವಿಚಾರವಾಗಿ ತನ್ನ ಮಗ ನಿಖಿಲ್‍ಗೆ ಜಮೀನು ಮಾಡಿಕೊಡುವಂತೆ ಕೇಳಿದಾಗ ಪತಿ ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಯಶೋಧಾ ತನ್ನ ಸ್ನೇಹಿತ ಮಂಜುನಾಥ್ ಮತ್ತು ಮಗ ನಿಖಿಲ್‍ನೊಂದಿಗೆ ಬೆಂಗಳೂರಿನಿಂದ ಕಾರಿನಲ್ಲಿ ಹೋಗಿ ತೊಂಡೆಗೆರೆಯಿಂದ ಚನ್ನಿಗರಾಯಪ್ಪನನ್ನು ಅಪಹರಿಸಿಕೊಂಡು ನಗರದ ಎಚ್‍ಎಸ್‍ಆರ್ ಲೇಔಟ್, ಗಾರೆಬಾವಿ ಪಾಳ್ಯದ ತನ್ನ ಮನೆಗೆ ಕರೆದುಕೊಂಡು ಬಂದಿದ್ದಾರೆ.
 
ಅಲ್ಲಿಯೂ ಜಮೀನನ್ನು ಮಗನ ಹೆಸರಿಗೆ ಬರೆದುಕೊಡುವಂತೆ ಕೇಳಿದಾಗ ಆತ ಅದಕ್ಕೆ ಒಪ್ಪುವುದಿಲ್ಲ. ತಂದೆಯ ನಡತೆಯಿಂದ ಬೇಸತ್ತ ಮಗ ನಿಖಿಲ್ ಕಗ್ಗಲೀಪುರದ ತನ್ನ ಸ್ನೇಹಿತರಾದ ಗುರುಕಿರಣ್, ವಿಶ್ವಾಸ್ ಸಹಾಯದಿಂದ ಚನ್ನಿಗರಾಯಪ್ಪನಿಗೆ ಮದ್ಯಪಾನ ಮಾಡಿಸಿ ಕಗ್ಗಲಿಪುರ ರಸ್ತೆಯ ಬ್ಯಾಟರಾಯನದೊಡ್ಡಿ ನಿರ್ಜನ ಪ್ರದೇಶದಲ್ಲಿರುವ ಕೆರೆಕೋಡಿ ಬಳಿ ಕರೆದುಕೊಂಡು ಹೋಗಿ ಅಲ್ಲಿಯೂ ಕುಡಿಸಿ ಸ್ನೇಹಿತರ ಸಹಾಯದಿಂದ ಕೈ-ಬಾಯಿ ಕಟ್ಟಿಹಾಕಿ ಎದೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments