ಹೆತ್ತ ತಂದೆಯನ್ನೇ ಕೊಂದ ಮಗ

Webdunia
ಸೋಮವಾರ, 16 ಮೇ 2022 (14:25 IST)
ಮಗನೇ, ತಂದೆಯನ್ನು ಚೂರಿಯಿಂದ ಚುಚ್ಚಿ ಕೊಲೆಗೈಯ್ದ ಘಟನೆ ಗದಗ ತಾಲೂಕಿನ ಹಾತಲಗೇರಿ ಗ್ರಾಮದಲ್ಲಿ ನಡೆದಿದೆ.
55 ವರ್ಷದ ಭರಮಪ್ಪ ದೊಡ್ಡಮನೆ ಎನ್ನುವ ವ್ಯಕ್ತಿಯೇ ಮಗನಿಂದ ಕೊಲೆಯಾಗಿದ್ದಾನೆ. ಪುತ್ರ ಸುರೇಶ್ ದೊಡ್ಡಮನೆ ಕೊಲೆ ಆರೋಪಿಯಾಗಿದ್ದಾನೆ. ಸದ್ಯ ತಲೆ ಮರಿಸಿಕೊಂಡಿರುವ ಆರೋಪಿ ಸುರೇಶನ ಶೋಧಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮನೆ ಯಜಮಾನನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಮದ್ವೆಯಾದಾಗಿನಿಂದ ಸುರೇಶ ಕುಡಿತದ ದಾಸ ಆಗಿದ್ದನಂತೆ ಯಾರು ಕುಡಿಸುತ್ತಾರೋ ಅವರ ಬಳಿ ಕೆಲಸಕ್ಕೆ ಹೋಗುತ್ತಿದ್ದ ಸಂಜೆಯಾಗ್ತಿದ್ದಂತೆ ಫುಲ್ ಟೈಟಾಗಿರುತ್ತಿದ್ದನಂತೆ ಊರಿನ ಹಬ್ಬಕ್ಕಾದರೂ ಮನೆ ಕೆಲಸ ಮಾಡಿ, ಬಣ್ಣ ಹಚ್ಚಿ ಮನೆ ಶುದ್ಧ ಮಾಡಿಕೊಳ್ಳಿ ಅಂತಾ ಸಹಜವಾಗೇ ಭರಮಪ್ಪ ಬುದ್ಧಿ ಹೇಳಿದ್ದನಂತೆ, ಬುದ್ಧಿ ಹೇಳಿ ತುಸು ಗದರಿದ ತಂದೆಯ ಮೇಲೆ ಯಮನಂತೆ ಎರಗಿದ್ದ.
ಮೃತ ಭರಮಪ್ಪನಿಗೆ ನಾಲ್ವರು ಮಕ್ಕಳು. ಆದರೆ ಹಿರಿಯ ಮಗ ಸುರೇಶನೊಂದಿಗೆ ಭರಮಪ್ಪ ಇದೇ ಮನೆಯಲ್ಲಿ ವಾಸವಾಗಿದ್ದ. ಸುರೇಶನಿಗೂ ಮೂವರು ಮಕ್ಕಳು ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments