Webdunia - Bharat's app for daily news and videos

Install App

ತಂದೆಯನ್ನೇ ಕೊಂದ ಮಾದಕ ದ್ರವ್ಯ ವ್ಯಸನಿ ಪುತ್ರ

Webdunia
ಗುರುವಾರ, 31 ಡಿಸೆಂಬರ್ 2020 (09:48 IST)
ಬೆಂಗಳೂರು: ಆಸ್ತಿ ಸಂಬಂಧ ಕಲಹವಾಗಿ ತಂದೆಯನ್ನೇ ಡ್ರಗ್ ವ್ಯಸನಿ ಮಗ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಭಾರತೀ ನಗರ ವ್ಯಾಪ್ತಿಯಲ್ಲಿ ನಡೆದಿದೆ.


ಆರ್ ಬಿಐ ಲೇಔಟ್ ನಿವಾಸಿ ಅಮರನಾಥ್ (62) ಹತ್ಯೆಗೀಡಾದವರು. ನಿವೃತ್ತ ಅಧಿಕಾರಿಯಾಗಿದ್ದ ಅಮರ್ ನಾಥ್ ಅವರ ಪುತ್ರ 21 ವರ್ಷದ ಮನಾಂಕ್ ನಿಂದ ಹತ್ಯೆಗೀಡಾಗಿದ್ದಾರೆ. ಇಬ್ಬರೂ ಮುಂಬೈನಲ್ಲಿ ನೆಲೆಸಿದ್ದರು. ಆದರೆ ಇಲ್ಲಿ ಮನೆ ಕಟ್ಟಿಸಲು ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಳೆದ ಕೆಲವು ತಿಂಗಳುಗಳಿಂದ ವಿಪರೀತ ಮಾದಕ ವಸ್ತುಗಳ ದಾಸನಾಗಿದ್ದ ಮನಾಂಕ್ ತನಗೆ ಚಿಕಿತ್ಸೆ ನೀಡುತ್ತಿದ್ದ ಆಪ್ತ ಸಮಾಲೋಚಕರ ಬಳಿಯೂ ತಂದೆ-ತಾಯಿಯನ್ನು ಕೊಂದರೆ ಆಸ್ತಿ ತನಗೆ ಸಿಗುತ್ತದಲ್ಲವೇ ಎಂದು ಪ್ರಶ್ನಿಸಿದ್ದ.  ಈ ವಿಚಾರ ತಂದೆಯ ಕಿವಿಗೂ ಬಿದ್ದಿತ್ತು. ಆದರೆ ಅದನ್ನು ಅವರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಮಂಗಳವಾರ ರಾತ್ರಿ ತಂದೆಯ ಮೇಲೆ ಬಿಸಿ ನೀರೆರಚಿ ಪ್ರಜ್ಞೆ ತಪ್ಪಿಸಿದ ಆರೋಪಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.  ಮನೆಗೆ ಬಂದ ಆಪ್ತಸಮಾಲೋಚಕರು ಇಬ್ಬರ ಸ್ಥಿತಿ ನೋಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ