Webdunia - Bharat's app for daily news and videos

Install App

ತಂದೆಯನ್ನೇ ಕೊಂದ ಮಾದಕ ದ್ರವ್ಯ ವ್ಯಸನಿ ಪುತ್ರ

Webdunia
ಗುರುವಾರ, 31 ಡಿಸೆಂಬರ್ 2020 (09:48 IST)
ಬೆಂಗಳೂರು: ಆಸ್ತಿ ಸಂಬಂಧ ಕಲಹವಾಗಿ ತಂದೆಯನ್ನೇ ಡ್ರಗ್ ವ್ಯಸನಿ ಮಗ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಭಾರತೀ ನಗರ ವ್ಯಾಪ್ತಿಯಲ್ಲಿ ನಡೆದಿದೆ.


ಆರ್ ಬಿಐ ಲೇಔಟ್ ನಿವಾಸಿ ಅಮರನಾಥ್ (62) ಹತ್ಯೆಗೀಡಾದವರು. ನಿವೃತ್ತ ಅಧಿಕಾರಿಯಾಗಿದ್ದ ಅಮರ್ ನಾಥ್ ಅವರ ಪುತ್ರ 21 ವರ್ಷದ ಮನಾಂಕ್ ನಿಂದ ಹತ್ಯೆಗೀಡಾಗಿದ್ದಾರೆ. ಇಬ್ಬರೂ ಮುಂಬೈನಲ್ಲಿ ನೆಲೆಸಿದ್ದರು. ಆದರೆ ಇಲ್ಲಿ ಮನೆ ಕಟ್ಟಿಸಲು ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಳೆದ ಕೆಲವು ತಿಂಗಳುಗಳಿಂದ ವಿಪರೀತ ಮಾದಕ ವಸ್ತುಗಳ ದಾಸನಾಗಿದ್ದ ಮನಾಂಕ್ ತನಗೆ ಚಿಕಿತ್ಸೆ ನೀಡುತ್ತಿದ್ದ ಆಪ್ತ ಸಮಾಲೋಚಕರ ಬಳಿಯೂ ತಂದೆ-ತಾಯಿಯನ್ನು ಕೊಂದರೆ ಆಸ್ತಿ ತನಗೆ ಸಿಗುತ್ತದಲ್ಲವೇ ಎಂದು ಪ್ರಶ್ನಿಸಿದ್ದ.  ಈ ವಿಚಾರ ತಂದೆಯ ಕಿವಿಗೂ ಬಿದ್ದಿತ್ತು. ಆದರೆ ಅದನ್ನು ಅವರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಮಂಗಳವಾರ ರಾತ್ರಿ ತಂದೆಯ ಮೇಲೆ ಬಿಸಿ ನೀರೆರಚಿ ಪ್ರಜ್ಞೆ ತಪ್ಪಿಸಿದ ಆರೋಪಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.  ಮನೆಗೆ ಬಂದ ಆಪ್ತಸಮಾಲೋಚಕರು ಇಬ್ಬರ ಸ್ಥಿತಿ ನೋಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ