ಭಾರತ್ ಜೋಡೋ ಯಾತ್ರೆಗೆ ನಾಳೆ ಸೋನಿಯಾ ಎಂಟ್ರಿ

Webdunia
ಭಾನುವಾರ, 2 ಅಕ್ಟೋಬರ್ 2022 (14:29 IST)
ಕಾಂಗ್ರೆಸ್​ಗೆ ನವ ಚೈತನ್ಯ ನೀಡುವ ಉದ್ದೇಶದಿಂದ ರಾಹುಲ್​ ಗಾಂಧಿ ಕೈಗೊಂಡಿರುವ ಭಾರತ್​ ಜೋಡೋ ಯಾತ್ರೆಗೆ ಕರ್ನಾಟಕದಲ್ಲಿ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಮಗನಿಗೆ ಸಾಥ್ ನೀಡಲು ಕಾಂಗ್ರೆಸ್​ನ ರಾಷ್ಟ್ರ ನಾಯಕಿ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಸಂಜೆಯೇ ಕರ್ನಾಟಕಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದು, ನಾಳೆ ಮೈಸೂರಿನಿಂದ ಆರಂಭವಾಗುವ ಪಾದಯಾತ್ರೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿವೆ. ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್​ ಹೆಚ್ಚು ಒತ್ತು ಕೊಡುತ್ತಿದ್ದು, ಅ.6ರಂದು ಪ್ರಿಯಾಂಕಾ ಗಾಂಧಿ ಕೂಡ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಪ್ರಿಯಾಂಕ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ.
 
ವಿಶೇಷ ವಿಮಾನದ ಮೂಲಕ ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ. ನಾಳೆ(ಸೋಮವಾರ)ಪಾದಯಾತ್ರೆ ಮುಗಿದ ಬಳಿಕ ಸೋನಿಯಾ ಕುಟುಂಬ ಕೊಡಗಿಗೆ ತೆರಳಲಿದೆ. ಭಾರತ್ ಜೋಡೋ ಪಾದಯಾತ್ರೆಗೆ ಅ.4 ಮತ್ತು‌ 5 ರಂದು ಬಿಡುವು ಇರುವ ಕಾರಣ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಕೊಡಗಿನ ಖಾಸಗಿ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾಳೆ ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸುವ ಬಗ್ಗೆ ಇನ್ನೂ ಖಚಿತವಾಗಿಲ್ಲ, ಇಂದು ಸಂಜೆ ಸೋನಿಯಾ ಗಾಂಧಿ ಆಗಮನ ಖಚಿತವಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments