Select Your Language

Notifications

webdunia
webdunia
webdunia
webdunia

ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ, ಅಹ್ಮದ್ ಪಟೇಲ್

ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ, ಅಹ್ಮದ್ ಪಟೇಲ್
ನವದೆಹಲಿ , ಬುಧವಾರ, 9 ಆಗಸ್ಟ್ 2017 (10:03 IST)
ಕುದುರೆ ವ್ಯಾಪಾರ, ರೆಸಾರ್ಟ್ ರಾಜಕಾರಣ ಎಲ್ಲ ಪ್ರಹಸನಗಳು ಮುಗಿದು ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ಗೆಲುವು ಸಾಧಿಸಿದ್ದಾರೆ. ಗುಜರಾತ್ ಶಾಸಕರು ಕು ದುರೆ ವ್ಯಾಪಾರದ ಭೀತಿಯಲ್ಲಿದ್ದಾಗ ಶಾಸಕರಿಗೆ ರಕ್ಷಣೆ ನೀಡಿ ಪಕ್ಷಕ್ಕೆ ನೆರವಾದ ಸಚಿವ ಡಿ.ಕೆ. ಶಿವಕುಮಾರ್`ಗೆ ಸೋನಿಯಾ ಗಾಂಧಿ ಮತ್ತು ಅಹ್ಮದ್ ಪಟೇಲ್ ಅಭಿನಂದನೆ ಸಲ್ಲಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರಿಗೆ ಕರೆ ಮಾಡಿದ್ದ ಸೋನಿಯಾ ಗಾಂಧಿ ಅಭಿನಂದನೆ ಸಲ್ಲಿಸಿದ್ದಾರೆ. ದೂರವಾಣಿ ಕರೆ ಮಾಡಿದ್ದ ಸೋನಿಯಾ ಗಾಂಧಿ, ಕಷ್ಟದ ಸಂದರ್ಭದಲ್ಲಿ ಪಕ್ಷಕ್ಕೆ ನೆರವಾಗಿದ್ದೀರಿ. ಉತ್ತಮ ಕೆಲಸ ಮಾಡಿದ್ದೀರಿ. ಅಹ್ಮದ್ ಪಟೇಲ್ ಗೆಲುವಿನ ಶ್ರೇಯ ನಿಮಗೂ ಸಲ್ಲಬೇಕು. ಕಿರುಕುಳವನ್ನ ಸಹಿಸಿ ಪಕ್ಷದ ಪರ ನಿಂತಿದ್ದೀರಿ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

 ಇತ್ತ, ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಹ್ಮದ್ ಪಟೇಲ್ ಸಹ ಡಿ.ಕೆ. ಶಿವಕುಮಾರ್ ಅವರಿಗೂ ಕರೆ ಮಾಡಿ ಧನ್ಯವಾದ ಹೇಳಿದ್ದಾರೆ. ತನ್ನ ಗೆಲುವಿಗೆ ಸಹಕರಿಸಿದ್ದಕ್ಕೆ ಆಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹೈಕಮಾಂಡ್`ನಿಂದ ಡಿ.ಕೆ. ಶಿವಕುಮಾರ್`ಗೆ ಭರ್ಜರಿ ಗಿಫ್ಟ್..?