Select Your Language

Notifications

webdunia
webdunia
webdunia
webdunia

ಆಂತರಿಕ ಬಿಕ್ಕಟ್ಟಿನಿಂದ ರಾಜ್ಯ ಸರಕಾರ ಪತನವಾಗಲಿದೆ: ಸದಾನಂದ ಗೌಡ

ಆಂತರಿಕ ಬಿಕ್ಕಟ್ಟಿನಿಂದ ರಾಜ್ಯ ಸರಕಾರ ಪತನವಾಗಲಿದೆ: ಸದಾನಂದ ಗೌಡ
ಕಲಬುರ್ಗಿ , ಭಾನುವಾರ, 26 ಜೂನ್ 2016 (10:56 IST)
ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಬಿಕ್ಕಟ್ಟಿನ ಪರಿಣಾಮವಾಗಿ ಯಾವುದೇ ಸಂದರ್ಭದಲ್ಲಿಯೂ ಸರಕಾರ ಪತನವಾಗಲಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಗುಡುಗಿದ್ದಾರೆ. 
 
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಸದಾನಂದ ಗೌಡ, ರಾಜ್ಯ ಸರಕಾರ ಅತಂತ್ರ ಪರಸ್ಥಿತಿಗೆ ತಲುಪಿದೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಮಿತಿ ಮೀರಿದೆ. ಯಾವುದೇ ಸಂದರ್ಭದಲ್ಲಿಯೂ ಸರಕಾರ ಪತನವಾಗಲಿದೆ ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮದೆ ಗುಂಪು ಮಾಡಿಕೊಂಡು ಆಡಳಿತ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತು ಹೋಗಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಶಕ್ತಿ ತುಂಬುತ್ತಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಭಿನ್ನರಲ್ಲೇ ಭಿನ್ನರಾಗ: ತಣ್ಣಗಾಯಿತು ಅತೃಪ್ತ ಶಾಸಕರ ಬಂಡಾಯದ ಬಿಸಿ