Webdunia - Bharat's app for daily news and videos

Install App

ಭಯೋತ್ಪಾದಕರನ್ನು ಹಿಡಿಯೋರಿಗೆ ಮರಿಗೌಡನನ್ನು ಹಿಡಿಯಲಾಗುವುದಿಲ್ಲವೇ: ಪರಮೇಶ್ವರ್ ತಿರುಗೇಟು

Webdunia
ಸೋಮವಾರ, 25 ಜುಲೈ 2016 (15:40 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರನ್ನು ಹಿಡಿಯೋರಿಗೆ ಸಿಎಂ ಆಪ್ತ ಮರಿಗೌಡನನ್ನು ಹಿಡಿಯಲಾಗುವುದಿಲ್ಲವೇ ಎಂದು ರಾಜ್ಯ ಗೃಹ ಖಾತೆ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ ಪ್ರಕರಣದ ಆರೋಪಿ ಮರಿಗೌಡ ಇನ್ನೂ ನಾಪತ್ತೆಯಾಗಿದ್ದಾನೆ. ಆತ ಅತಿ ಬುದ್ಧಿವಂತಿಕೆ ಪ್ರದರ್ಶನ ಮಾಡುತ್ತಿದ್ದಾನೆ. ಭಯೋತ್ಪಾದಕರನ್ನು ಹಿಡಿಯೋರಿಗೆ ಇವರನ್ನು ಹಿಡಿಯಲಾಗುವುದಿಲ್ಲವೇ. ಕೆಲ ಪ್ರಕರಣಗಳಲ್ಲಿ ಹೀಗಾಗುತ್ತೇ ಎನು ಮಾಡಲಾಗುವುದಿಲ್ಲ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.
 
ಜುಲೈ 3 ರಂದು ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕಾರು ಅಡ್ಡಗಟ್ಟಿ ಅವರಿಗೆ ಬೆದರಿಕೆ ಹಾಕಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಿಎಂ ಆಪ್ತ ಮರಿಗೌಡ ವಿರುದ್ಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮರಿಗೌಡ ವಿರುದ್ಧ ಪ್ರಕರಣ ದಾಖಲಾಗಿ 22 ದಿನಗಳು ಕಳೆದಿದ್ದರು ಆತನನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದರು.
 
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೆಲ ಸಣ್ಣ ಪುಟ್ಟ ಪ್ರಕರಣಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಬಸ್‌ ಬಂದ್ ಶಾಂತಿಯುತವಾಗಿ ನಡೆದಿದೆ. ನಾಳೆಯೂ ಪ್ರತಿಭಟನೆ ಮುಂದುವರೆಯುವ ಸಾಧ್ಯತೆಗಳಿದ್ದು, ಶಾಂತಿ ಸುವ್ಯವಸ್ಥೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ರಾಜ್ಯ ಗೃಹ ಖಾತೆ ಸಚಿವ ಜಿ. ಪರಮೇಶ್ವರ್ ತಿಳಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments