Webdunia - Bharat's app for daily news and videos

Install App

ವಿರ್ದಾರ್ಥಿ ನಿಲಯಗಳ ನ್ಯೂನ್ಯತೆ ಸರಿಪಡಿಸಲು ಸೂಕ್ತ ಕ್ರಮ: ಎಚ್.ಆಂಜನೇಯ

Webdunia
ಶನಿವಾರ, 7 ಜನವರಿ 2017 (08:30 IST)
ಸಮಾಜ ಕಲ್ಯಾಣ ಇಲಾಖೆ ಅಡಿಯ ವಿದ್ಯಾರ್ಥಿ ನಿಲಯಗಳ ನ್ಯೂನ್ಯತೆಗಳನ್ನು ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಭರವಸೆ ನೀಡಿದ್ದಾರೆ.
 
ವಿಧಾನಸೌಧದ ತಮ್ಮ ಕಚೇರಿಯಲ್ಲಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದವರು ವಿರ್ದಾರ್ಥಿ ನಿಲಯಗಳಿಗೆ ಸಂಬಂಧಿಸಿದಂತೆ ನೀಡಿರುವ ವರದಿ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿನಿಲಯಗಳ ನ್ಯೂನ್ಯತೆಗಳ ಬಗ್ಗೆ ಬಿಜೆಪಿಯವರು ನೀಡಿರುವ ವರದಿಯನ್ನು ಗಮನಿಸಿದ್ದೇನೆ. ಸದ್ಯದಲ್ಲಿಯೇ ನ್ಯೂನ್ಯತೆಗಳನ್ನು ಸರಿಪಡಿಸಲಾಗುತ್ತದೆ ಎಂದು ಹೇಳಿದರು. 
 
ಹಾಸ್ಟೆಲ್‌ಗಳ ಭದ್ರತೆಗಾಗಿ ಕಾವಲುದಾರರ ನೇಮಕದ ಜೊತೆಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲಾ ಹಾಸ್ಟೆಲ್‌ಗಳಲ್ಲಿ ಸಿಸಿಟಿವಿ ಅಳವಡಿಸುವುದಾಗಿ ಭರವಸೆ ನೀಡಿದ್ದಾರೆ. 
 
ಹಾಸ್ಟೆಲ್ ವಾರ್ಡನ್‌ಗಳ ವೇತನ ಪಾವತಿ ವಿಳಂಬವಾಗಿದ್ದರೆ ಆ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳುಲವುದರ ಜೊತೆಗೆ ಶುಚಿತ್ವಕ್ಕೂ ಗಮನ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ತಿಳಿಸಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments