Webdunia - Bharat's app for daily news and videos

Install App

ನಿಧಿಗಾಗಿ ವಾಮಾಚಾರ; ಹೆಣ್ಣುಮಗು ಪತ್ತೆ!

Webdunia
ಬುಧವಾರ, 10 ನವೆಂಬರ್ 2021 (10:52 IST)
ರಾಮನಗರ : ಸಾತನೂರು ಸಮೀಪದ ಭೂಹಳ್ಳಿ ಗ್ರಾಮದಲ್ಲಿ ನಿಧಿ ಆಸೆಗೆ ಕಳೆದ ಅನೇಕ ವರ್ಷಗಳಿಂದ ಪೂಜೆ ಸಲ್ಲಿಸಿ, ವಾಮಾಚಾರ ನಡೆಸುತ್ತಿದ್ದವರನ್ನು ಮಂಗಳವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ವಿಜಯ ಕರ್ನಾಟಕ ಪತ್ರಿಕೆ ನೀಡಿದ್ದ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿದ ಸಾತನೂರು ಪೊಲೀಸರು, ಬರೊಬ್ಬರಿ 13 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಏನಿದು ಘಟನೆ?
ಸಾತನೂರು ಹೋಬಳಿಯ ಭೂಹಳ್ಳಿ ಗ್ರಾಮದಲ್ಲಿನ ಮನೆಯೊಂದರಲ್ಲಿ ಕಳೆದ ಅನೇಕ ವರ್ಷಗಳಿಂದಲೂ ವಾಮಾಚಾರ ನಡೆಯುತ್ತಿತು ಎನ್ನಲಾಗಿದೆ. ನಿಧಿ ಶೋಧಕ್ಕಾಗಿ ಈ ಪೂಜೆ ನಡೆಸಲಾಗುತಿದೆ ಎಂಬ ಆರೋಪವು ಕೇಳಿಬಂದಿತ್ತು. ಈ ಬಗ್ಗೆ ವಿಜಯ ಕರ್ನಾಟಕ ಪತ್ರಿಕೆಯು ಕಳೆದೊಂದು ವಾರದಿಂದ ಎಸ್ಪಿ ಅವರೊಟ್ಟಿಗೆ ಸಂಪರ್ಕ ಸಾಧಿಸಿತ್ತು. ಮಂಗಳವಾರ ರಾತ್ರಿ ಎರಡು ಕಾರುಗಳಲ್ಲಿ ಪೂಜೆಗೆಂದು ಬಂದಿದ್ದವರ ಬಗ್ಗೆ ವಿಜಯ ಕರ್ನಾಟಕ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ನೀಡಿತ್ತು.
ಇದರ ಬೆನ್ನತ್ತಿದ್ದ ಪೊಲೀಸರು ರಾತ್ರೋ ರಾತ್ರಿ ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳ ಪೈಕಿ ಎಂಟು ಮಂದಿ ಹೊರ ಜಿಲ್ಲೆಯವರಾಗಿದ್ದು, ಇದರೊಂದಿಗೆ 4 ವರ್ಷದ ಹೆಣ್ಣು ಮಗುವನ್ನು ಕಂಡು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಹೆಣ್ಣು ಮಗುವನ್ನು ನಿಧಿ ಆಸೆಗಾಗಿ ಬಲಿ ಕೊಡಲು ತಂದಿರಬಹುದು ಎಂಬ ಅನುಮಾನ ಕೂಡ ವ್ಯಕ್ತವಾಗಿದೆ. ಆರೋಪಿಗಳಿಗೆ ಗ್ರಾಮದಲ್ಲಿ ಮನೆ ಬಾಡಿಗೆಗೆ ನೀಡಿದ್ದ ಮಾಲೀಕ, ಆಕೆಯ ಪತ್ನಿ, ಇಬ್ಬರು ಮಕ್ಕಳು, ಮಾಲೀಕನ ಪತ್ನಿಯ ತಮ್ಮ ಸೇರಿದಂತೆ ಒಟ್ಟು 13 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ಜೊತೆ ಇದ್ದ 4 ವರ್ಷದ ಹೆಣ್ಣು ಮಗು ಯಾರಿಗೆ ಸೇರಿದ್ದು ಎಂಬ ವಿಚಾರ ಪೊಲೀಸರಿಗೆ ತಿಳಿದುಬಂದಿಲ್ಲ. ವಿಸ್ತೃತ ತನಿಖೆಯ ಬಳಿಕ ಎಲ್ಲಾ ಸತ್ಯ ವಿಚಾರಗಳು ಹೊರಬರಬೇಕಿದೆ. ಇನ್ನು ಹೆಣ್ಣು ಮಗುವನ್ನು ಆರೋಪಿಗಳು ನಿಧಿಗಾಗಿ ಬಲಿ ನೀಡಲು ಕರೆತರಲಾಗಿದೆ ಎಂದು ಪೊಲೀಸರು ಶಂಕಿಸಿದ್ದು, ದಾಳಿ ನಡೆಸಿದ ವೇಳೆ ಇಡೀ ಮನೆಯಲ್ಲೆಲ್ಲ ಗುಂಡಿಗಳು ಪತ್ತೆಯಾಗಿವೆ. ರಾತ್ರೋ ರಾತ್ರಿ ಪೂಜೆ ಸಲ್ಲಿಸಿ, ಬೆಳಗಾಗುವಷ್ಟರಲ್ಲಿ ಆರೋಪಿಗಳು ಪರಾರಿಯಾಗುತ್ತಿದ್ದರು. ಪೂಜೆ ವೇಳೆ, ಇಡೀ ಊರನ್ನೆ ಕಬ್ಜ ಮಾಡಿಕೊಳ್ಳಲು ರೌಡಿಗಳನ್ನು ಬಳಸಿಕೊಳ್ಳಲಾಗುತ್ತಿತ್ತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments