ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ: ಕುಮಾರಸ್ವಾಮಿ

Sampriya
ಮಂಗಳವಾರ, 16 ಏಪ್ರಿಲ್ 2024 (13:59 IST)
ಬೆಂಗಳೂರು: ಗ್ಯಾರಂಟಿಗಳಿಂದ ಕಾಂಗ್ರೆಸ್ ದಾರಿತಪ್ಪಿಸುತ್ತಿದೆ ಎಂದಿದ್ದೇನೆ ಹೊರತು ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಲ್ಲ. ನನ್ನ ಹೇಳಿಕೆಯಿಂದ ಯಾವುದೇ ಮಹಿಳೆಯರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಜೆಡಿಎಸ್‌ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಹೇಳಿಕೆ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್‌ಡಿಕೆ ಅವರು, ನಾನು ನೀಡಿದ ಹೇಳಿಕೆಯನ್ನು ತಿರುಚಲಾಗಿದೆ.  ಹೀಗಾಗಿ ರಾಜ್ಯದ ತಾಯಂದಿರಿಗೆ ನೋವು ಆಗಿದ್ದರೆ ನಾನು ಮತ್ತೊಮ್ಮೆ ವಿಷಾದಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ತುಮಕೂರಿನ ತುರವೇಕೆರೆಯಲ್ಲಿ ಪ್ರಚಾರದ ವೇಳೆ ಕಾಂಗ್ರೆಸ್ ವಿರುದ್ಧ ಟೀಕಿಸುವ ಭರದಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರು ಎಚ್‌ಡಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅದಲ್ಲದೆ ಮಂಡ್ಯದ  ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರು ಎಚ್‌ಡಿಕೆ ವಿರುದ್ಧ ಪ್ರತಿಭಟನೆ ನಡೆಸಿ, ಗೋ ಬ್ಯಾಕ್ ಎಚ್‌ಡಿಕೆ ಘೋಷಣೆ ಕೂಗಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಅವರು, ಮಂಡ್ಯದಲ್ಲಿ ನನ್ನ ವಿರುದ್ಧ ಮಹಿಳೆಯರಿಂದ ಗೋಬ್ಯಾಕ್ ಕುಮಾರಸ್ವಾಮಿ ಪ್ರತಿಭಟನೆ ಮಾಡಲಾಗಿದೆ. ಹಣ ಕೊಟ್ಟಿದ್ದಕ್ಕೆ‌ ಬಂದಿದ್ದೇವೆ ಎಂದು ಪ್ರತಿಭಟನೆಯಲ್ಲಿದ್ದ ಮಹಿಳೆಯರು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಹೇಮಮಾಲಿನಿ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ಇದು ಮಹಿಳೆಯರಿಗೆ ಕೊಡುವ ಗೌರವವೇ? ಇವರು ಮಹಿಳೆಯರಿಗೆ ಗೌರವ ಕೊಡುವ ಮಹಾನುಭಾವರೇ? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments