Webdunia - Bharat's app for daily news and videos

Install App

'ಈ ಸಲ ಕಪ್‌ ನಮ್ದೆ' ಎಂದಾ ಸೌಮ್ಯ ರೆಡ್ಡಿಗೆ ಕೊನೆಗೆ ಕೈಗೆ ಬಂದಿದ್ದೇನು

sampriya
ಮಂಗಳವಾರ, 4 ಜೂನ್ 2024 (15:48 IST)
Photo By X
ಬೆಂಗಳೂರು: ಗೆಲುವಿನ ಲೆಕ್ಕಾಚಾರದಲ್ಲಿ ಬೆಂಗಳೂರು ದಕ್ಷಿಣದಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಮಗಳು ಸೌಮ್ಯ ರೆಡ್ಡಿ ಅವರನ್ನು ಕಣಕ್ಕಿಳಿಸಿದ ಕಾಂಗ್ರೆಸ್‌ ಲೆಕ್ಕಾಚಾರ ಕೊನೆಗೂ ಕೆಲಸ ಮಾಡಲಿಲ್ಲ. 

ಭಾರೀ ಕುತೂಹಲ ಕೆರಳಿಸಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಭರ್ಜರಿ ಮುನ್ನಡೆ ಸಾಧಿಸಿ, ಗೆಲುವಿನ ದಡ ಸೇರುತ್ತಿದ್ದಾರೆ. ಈ ಮೂಲಕ ಎರಡನೇ ಬಾರಿ ಲೋಕಸಭೆ ಪ್ರವೇಶಿಸುವ ತೇಜಸ್ವಿ ಕನಸು ನನಸಾಗುವ ಹಂತಕ್ಕೆ ಬಂದು ನಿಲ್ಲುವಂತೆ ಕಾಣುತ್ತಿದೆ.

2019ರಲ್ಲಿ ಜಯನಗರ ವಿಧಾಸನಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೇಡ್ಡಿ ಅವರಿಗೆ ಈ ಬಾರಿ ಬೆಂಗಳೂರು ದಕ್ಷಿಣದಿಂದ ಟಿಕೆಟ್‌ ನೀಡಿತ್ತು. ಅದರಂತೆ ಬಿರುಸಿನ ಪ್ರಚಾರ ಮಾಡಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರನ್ನು ಸೋಲಿಸುವುದಾಗಿ ಹೇಳಿದ್ದರು.

ಇನ್ನೂ ಪ್ರಚಾರದ ವೇಳೆ ಸೌಮ್ಯ ರೆಡ್ಡಿ ಅವರು ಈ ಸಲ ಕಪ್‌ ನಮ್ದೆ ಎಂದು ಹೇಳಿದ್ದರು. ಆರಂಭಿಕ ಹಂತದ ಮತ ಎಣಿಕೆಯಲ್ಲಿ ಸೌಮ್ಯ ರೆಡ್ಡಿಗೆ ಹಿನ್ನಡೆಯಾಗುತ್ತಿರುವಾಗಲೇ ಬಿಜೆಪಿಗರು ಸೌಮ್ಯ ಹೇಳಿಕೆ ನೀಡಿದ ವಿಡಿಯೋವನ್ನು ಟ್ರೋಲ್‌ ಮಾಡಿ ಕಪ್‌ ಎಲ್ಲಿ ಎಂದು ಪ್ರಶ್ನಿಸುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments