Select Your Language

Notifications

webdunia
webdunia
webdunia
webdunia

ಪುನೀತ್ ನಮನ ದಕ್ಷಿಣ ಭಾರತದ ಬಹುತೇಕ ಗಣ್ಯರು ಭಾಗಿ

ಪುನೀತ್ ನಮನ ದಕ್ಷಿಣ ಭಾರತದ ಬಹುತೇಕ ಗಣ್ಯರು ಭಾಗಿ
ಬೆಂಗಳೂರು , ಮಂಗಳವಾರ, 16 ನವೆಂಬರ್ 2021 (18:34 IST)
ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಯ ಚಿತ್ರರಂಗದ ಗಣ್ಯರು ಮಂಗಳವಾರ ಬೆಂಗಳೂರಿನಲ್ಲಿ ನಡೆದ ಪುನೀತ ನಮನ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಅಗಲಿದ ನಟ ಪುನೀತ್ ರಾಜ್ ಕುಮಾರ್ ಗೆ ನಮ ಸಲ್ಲಿಸಿದರು.
 
ಕನ್ನಡ ವಾಣಿಜ್ಯ ಚಲನಚಿತ್ರ ಮಂಡಳಿ, ನಿರ್ಮಾಪಕ ಮತ್ತು ನಿರ್ದೇಶಕರ ಮಂಡಳಿ ಜಂಟಿಯಾಗಿ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಗೆ ನಮನ ಸಲ್ಲಿಸುವ ಗಣ್ಯರು ಪುಷ್ಪ ನಮನ ಸಲ್ಲಿಸಿದರು.ನಟ ಶಿವರಾಜ್ ಕುಮಾರ್, ಪತ್ನಿ ಅಶ್ವಿನ್ ಪುನೀತ್ ರಾಜ್ ಕುಮಾರ್ ಮತ್ತು ಕುಟುಂಬವರ್ಗ ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮೈಸೂರು ಮಹಾರಾಜ ವಂಶಸ್ಥ ಯದುವೀರ್ ಒಡೆಯರ್ ಮುಂತಾದ ಗಣ್ಯರು ಪುಷ್ಪ ನಮನ ಸಲ್ಲಿಸಿದರು.
 
ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ನುಡಿನಮನ ಸಲ್ಲಿಸುವ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು. ಸಾಕ್ಷ್ಯಚಿತ್ರಕ್ಕೆ ನಟ ಸುದೀಪ್ ಧ್ವನಿ ನೀಡಿದ್ದರು. ಸಾಹಿತಿ ನಾಗೇಂದ್ರ ಪ್ರಸಾದ್ ರಚಿಸಿ, ಗುರುಕಿರಣ್ ಸಂಗೀತ ನಿರ್ದೇಶನ ನೀಡಿದ ಗೀತನಮನವನ್ನು ಗಾಯಕ ವಿಜಯ್ ಪ್ರಕಾಶ್ ಹಾಡಿದರು.
 
ಕಾರ್ಯಕ್ರಮದಲ್ಲಿ ನಟ ದರ್ಶನ್, ಶರಣ್, ದುನಿಯಾ ವಿಜಯ್, ಪ್ರಕಾಶ್ ರೈ, ಶ್ರೀಕಾಂತ್, ವಿಶಾಲ್ ಸೇರಿದಂತೆ ಹಲವು ನಟರು, ಸಹಕಲಾವಿದರು, ತಂತ್ರಜ್ಞರು ಸೇರಿದಂತೆ ಸುಮಾರು 2000 ಸಿನಿ ಗಣ್ಯರು ಪಾಲ್ಗೊಂಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ರಾಜಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ