Webdunia - Bharat's app for daily news and videos

Install App

ಸರಣಿ ಅಪಘಾತ: ಲೋಕಾಯುಕ್ತ ಎಸ್‌ಪಿ ಸೇರಿ 2 ಬಲಿ

Webdunia
ಗುರುವಾರ, 23 ಫೆಬ್ರವರಿ 2017 (07:40 IST)
ಭೀಕರ ಅಪಘಾತದಲ್ಲಿ ಲೋಕಾಯುಕ್ತ ಎಸ್‌ಪಿ ಸೇರಿ ಇಬ್ಬರು ದುರ್ಮರಣವನ್ನಪ್ಪಿದ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.
 
ರವಿಕುಮಾರ್(34) ಅವರು ತಮ್ಮ ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ  ಮೈಸೂರಿಗೆ ಪ್ರಯಾಣಿಸುತ್ತಿದ್ದಾಗ  ರಾಮೋಹಳ್ಳಿ ಸಮೀಪ ಅಪಘಾತ ಸಂಭವಿಸಿದೆ.
 
ಟಿಪ್ಪರ್‌ ವಾಹನವೊಂದು ರಸ್ತೆ ವಿಭಜಕವನ್ನು ದಾಟಿ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಯಾಯಿತು. ಬಳಿಕ ಆಟೋ ಮತ್ತಿತರ ವಾಹನಗಳಿಗೂ ಡಿಕ್ಕಿ ಹೊಡೆಯಿತು. ಇದರಿಂದ ಕಾರಿನಲ್ಲಿದ್ದ ರವಿಕುಮಾರ್ ಹಾಗೂ ಚಾಲಕ ಕಿರಣ್‌ಕುಮಾರ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
 
ದೊಡ್ಡಬಳ್ಳಾಪುರ ತಾಲ್ಲೂಕು ಸಾಸಲು ಗ್ರಾಮದ ರವಿಕುಮಾರ್ 2008ರಲ್ಲಿ ಡಿವೈಎಸ್‌ಪಿಯಾಗಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು.
 
ರವಿಕುಮಾರ್ ಅವರಿಗೆ 8 ದಿನಗಳ ಹಿಂದಷ್ಟೇ ಹೆಣ್ಣುಮಗು ಜನಿಸಿತ್ತು ಎಂದು ತಿಳಿದುಬಂದಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments